HomeGadag Newsಲಿಂಕ್ ಗೊಬ್ಬರ ದಂಧೆ ಬಂದ್ ಮಾಡ್ರಿ

ಲಿಂಕ್ ಗೊಬ್ಬರ ದಂಧೆ ಬಂದ್ ಮಾಡ್ರಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ತಾಲೂಕಿನ ಕೆಲ ಗೊಬ್ಬರ ಅಂಗಡಿಗಳಲ್ಲಿ ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪಟ್ಟಣದ ಪಾದಗಟ್ಟಿ ಸಮೀಪ ಬಜಾರ್ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕರವೇ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಹೊಗೆಸೊಪ್ಪಿನ ಹಾಗೂ ತಾಲೂಕು ಅಧ್ಯಕ್ಷ ಲೋಕೇಶ ಸುತಾರ, “ಡಿ.ಎ.ಪಿ. ಗೊಬ್ಬರ ದಾಸ್ತಾನು ಇದ್ದರೂ ಇಲ್ಲವೆಂದು ಹೇಳಿ ರೈತರಿಗೆ ವಿತರಣೆ ಮಾಡುತ್ತಿಲ್ಲ. ಕೆಲ ಅಂಗಡಿ ಮಾಲೀಕರು ಡಿ.ಎ.ಪಿ. ಜೊತೆ ಇತರೆ ಗೊಬ್ಬರಗಳನ್ನು ಕಡ್ಡಾಯವಾಗಿ ಖರೀದಿಸುವಂತೆ ಒತ್ತಾಯಿಸುತ್ತಿದ್ದಾರೆ. ಅಲ್ಲದೇ ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

ಕೆಲ ವ್ಯಾಪಾರಿಗಳು ಗೊಬ್ಬರವನ್ನು ಬೇರೆ ಬೇರೆ ಸ್ಥಳಗಳಲ್ಲಿ ಸಂಗ್ರಹಿಸಿಟ್ಟಿದ್ದು, ಇದು ನಿಯಮ ಉಲ್ಲಂಘನೆಯಾಗಿದೆ. ಗೊಬ್ಬರ ಅಂಗಡಿಗಳ ಮುಂಭಾಗದಲ್ಲಿ ಸರ್ಕಾರ ನಿಗದಿಪಡಿಸಿದ ದರಪಟ್ಟಿ ಪ್ರದರ್ಶಿಸಬೇಕು. ನಕಲಿ ಬಿಲ್ ನೀಡುತ್ತಿರುವ ಅಂಗಡಿ ಮಾಲೀಕರ ವಿರುದ್ಧ ಕ್ರಮ ಕೈಗೊಂಡು ಪರವಾನಗಿ ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.

ವಾರದೊಳಗೆ ಸಮಸ್ಯೆ ಬಗೆಹರಿಸದಿದ್ದರೆ ರಾಜ್ಯ ಹೆದ್ದಾರಿ ಬಂದ್ ಮಾಡಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಪ್ರತಿಭಟನೆ ವೇಳೆ ಶಿರಹಟ್ಟಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಶಿವಕುಮಾರ ಕಾಶಪ್ಪನವರ ಅವರನ್ನು ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡರು. “ಇಷ್ಟು ದಿನಗಳಿಂದ ಅಕ್ರಮ ನಡೆಯುತ್ತಿದ್ದರೂ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಈ ಅಕ್ರಮದಲ್ಲಿ ಕೆಲ ಅಧಿಕಾರಿಗಳ ಕೈವಾಡವೂ ಇದೆ” ಎಂದು ಆರೋಪಿಸಿದರು.

ಸ್ಥಳಕ್ಕೆ ಆಗಮಿಸಿದ ಗ್ರೇಡ್-2 ತಹಸೀಲ್ದಾರ್ ಮಂಜುನಾಥ ಅಮಾಸಿ ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದರು. ಕೃಷಿ ಅಧಿಕಾರಿ ಚಂದ್ರಶೇಖರಗೌಡ ನರಸಮ್ಮನವರ, ಪಿಎಸ್‌ಐ ನಾಗರಾಜ ಗಡದ ಹಾಗೂ ಕ್ರೈಂ ಪಿಎಸ್‌ಐ ಟಿ.ಕೆ. ರಾಠೋಡ ಭದ್ರತಾ ವ್ಯವಸ್ಥೆ ಕೈಗೊಂಡಿದ್ದರು.

ಪ್ರತಿಭಟನೆಯಲ್ಲಿ ತಾಲೂಕು ಗೌರವಾಧ್ಯಕ್ಷ ಪ್ರವೀಣ ಗಾಣಗೇರ, ಬಸವರಾಜ ಮಲ್ಲೂರ, ಅರುಣ ಮೆಕ್ಕಿ, ಗಂಗಾಧರ ಕರ್ಜಕಣ್ಣವರ, ಗಂಗಾಧರ ಕೊಂಚಿಗೇರಿಮಠ, ಮಂಜುನಾಥ ಕೊಡಳ್ಳಿ, ಫಕ್ಕೀರೇಶ ಅಣ್ಣಿಗೇರಿ, ಚನ್ನಬಸಯ್ಯ ಗಡ್ಡದೇವರಮಠ, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಸಾವಿತ್ರಿ ಅತ್ತಿಗೇರಿ, ಹುಲಿಗೆಮ್ಮ ಮೇವುಂಡಿ, ಜಯಮ್ಮ ತುಪ್ಪದ, ಲಕ್ಷ್ಮಕ್ಕ ಪಶುಪತಿಹಾಳ, ರೇಷ್ಮಾ ಜಾದವ, ಸಾವಕ್ಕ ಮಳ್ಳೋಳ್ಳಿ ಸೇರಿದಂತೆ ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು.

“ರೈತರಿಗೆ ಬೇಕಾದ ಗೊಬ್ಬರವನ್ನು ಕೃತಕವಾಗಿ ತಡೆದು ಹೆಚ್ಚುವರಿ ದರಕ್ಕೆ ಮಾರಾಟ ಮಾಡುವುದು ರೈತರ ಮೇಲಿನ ದೌರ್ಜನ್ಯ. ಕೂಡಲೇ ಅಕ್ರಮ ತಡೆಗಟ್ಟಬೇಕು.”
ಬಸವರಾಜ ಹೊಗೆಸೊಪ್ಪಿನ, ಕರವೇ ಜಿಲ್ಲಾ ಪ್ರಧಾನ ಕಾರ್ಯದರ್ಶಿ


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!