ಚಿಕ್ಕಮಗಳೂರು:- ಚಿಕ್ಕಮಗಳೂರಿನ ಹಲವೆಡೆ ಇಂದಿನಿಂದ 2 ದಿನ ಮದ್ಯಮಾರಾಟ ಬಂದ್ ಮಾಡಲಾಗಿದೆ.
ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ದತ್ತಜಯಂತಿ ಅಂಗವಾಗಿ ಜಿಲ್ಲೆಯ ಹಲವೆಡೆ ಇಂದಿನಿಂದ 2 ದಿನ ಮದ್ಯಮಾರಾಟ ಬಂದ್ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ಅದರಂತೆ ಚಿಕ್ಕಮಗಳೂರು, ಕಡೂರು, ಮೂಡಿಗೆರೆ, ಕೊಪ್ಪ, ಎನ್ಆರ್ಪುರ, ತರೀಕೆರೆ, ಶೃಂಗೇರಿ ತಾಲೂಕು ವ್ಯಾಪ್ತಿಯಲ್ಲಿ ಮದ್ಯಮಾರಾಟ ನಿಷೇಧಿಸಲಾಗಿದೆ.
ಇಂದು ಚಿಕ್ಕಮಗಳೂರು ನಗರದಲ್ಲಿ ಬೃಹತ್ ಶೋಭಾಯಾತ್ರೆ ನಡೆಯಲಿದೆ. ನಾಳೆ ದತ್ತ ಮಾಲಾಧಾರಿಗಳು ದತ್ತ ಪಾದುಕೆ ದರ್ಶನ ಪಡೆಯಲಿದ್ದಾರೆ. ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ದರ್ಶನ ಇರಲಿದೆ.
ಇನ್ನೂ ದತ್ತಜಯಂತಿ ಭದ್ರತೆಗಾಗಿ ರಾಜ್ಯದಾದ್ಯಂತ ವಿವಿಧೆಡೆಗಳಿಂದ ಪೊಲೀಸರು ಚಿಕ್ಕಮಗಳೂರಿಗೆ ಆಗಮಿಸಿದ್ದಾರೆ. ಇದೀಗ ಚಿಕ್ಕಮಗಳೂರು ನಗರ ಸೇರಿದಂತೆ ಚಂದ್ರದ್ರೋಣ ಪರ್ವತ ಭಾಗದಲ್ಲಿ ತುಂತುರು ಮಳೆ, ಚಳಿ ಹೆಚ್ಚಾಗಿರುವುದು ಅವರಿಗೆ ಸಮಸ್ಯೆ ತಂದೊಡ್ಡಿದೆ.