ಮಕ್ಕಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಇಲ್ಲಿನ ಶ್ರೀ ರಾಮಕರುಣಾನಂದ ಶಿಕ್ಷಣ ಸಂಸ್ಥೆಯ ಶಾಲೆಯಲ್ಲಿ ವಿದ್ಯಾರಂಭ ಕಾರ್ಯಕ್ರಮ ನೆರವೇರಿತು. ಶಾಲೆಗೆ ನೂತನವಾಗಿ ಪ್ರವೇಶ ಪಡೆದ ಮಕ್ಕಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮ ಜರುಗಿತು.

Advertisement

ಜ್ಞಾನ ದೇವತೆ ಸರಸ್ವತಿಯ ಪೂಜೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಸುಮಾರು 14 ಮಕ್ಕಳ ಪೋಷಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಪುಟಾಣಿಗಳಿಗೆ ಅಕ್ಕಿಯಲ್ಲಿ ಓಂಕಾರ ಬರೆಸಿ ಓಂಕಾರ ಉಚ್ಛಾರಣೆ ಮಾಡಿಸುವುದರ ಮೂಲಕ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿಸಿದರು.

ಪ್ರಾಂಶುಪಾಲರಾದ ರಾಘವೇಂದ್ರ ಕೆ.ಆರ್ ಮಗುವಿನ ಬೆಳವಣಿಗೆಯಲ್ಲಿ ಇಂತಹ ಸಂಸ್ಕಾರ ಕೊಡುವುದರ ಉದ್ದೇಶವನ್ನು ವಿವರಿಸಿದರು. ಶಿಕ್ಷಕಿಯರಾದ ಸಮೀನಾಬಾನು, ವಿಜಯಲಕ್ಷ್ಮೀ, ಪ್ರತಿಭಾ ಕಮ್ಮಾರ್ ಹಾಗೂ ವನಜಾಕ್ಷಿ ನೀರಲಗಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ವಿ.ಡಿ. ರಂಗಪ್ಪನವರ ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here