ಬೆಂಗಳೂರು, ಗದಗ, ಕಲಬುರ್ಗಿ ಸೇರಿ ರಾಜ್ಯದ ಹಲವೆಡೆ ಇಂದು ಬೆಳ್ಳಂ ಬೆಳಗ್ಗೆ ‘ಲೋಕಾ’ ದಾಳಿ

0
Spread the love

ಕಲಬುರಗಿ:- ಇಂದು ಕರ್ನಾಟಕದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಗದಗ, ಕಲಬುರಗಿ, ಶಿವಮೊಗ್ಗ, ಚಿಕ್ಕಮಗಳೂರು ಸೇರಿ ವಿವಿಧ ಕಡೆ ಲೋಕಾಯುಕ್ತ ಅಧಿಕಾರಿಗಳ ಮನೆಗಳ ದಿಢೀ‌ರ್ ದಾಳಿ ನಡೆಸಿದ್ದಾರೆ.

Advertisement

ಕಲಬುರ್ಗಿಯಲ್ಲಿ ದಾಳಿ:

ಆದಾಯಕ್ಕಿಂತ ಹೆಚ್ಚು ಆದಾಯಗಳಿಸಿದ ಹಿನ್ನೆಲೆ ಕಲಬುರಗಿ ಲೋಕಾ ಎಸ್ಪಿ ಬಿ.ಕೆ.ಉಮೇಶ್,ಡಿವೈಎಸ್‌ ಪಿ ಗೀತಾ ಬೇನಾಳ ನೈತೃತ್ವದಲ್ಲಿ ಕಲಬುರಗಿಯಲ್ಲಿ ದಾಳಿ ನಡೆದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಇಇ ಮಲ್ಲಿಕಾರ್ಜುನ ಅಲಿಪುರ ಬೆಂಗಳೂರಿನ ಮನೆ ಹಾಗೂ ಕಲಬುರಗಿ ಮನೆ ಕಚೇರಿ ಹಾಗೂ ಸಣ್ಣೂರು ಪಿಡಿಓ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ನಡೆಸಿದ್ದಾರೆ. ಇನ್ನೂ ನಾಲ್ಕು ದಿನಗಳಲ್ಲಿ ನಿವೃತಿಯಾಗಲಿದ್ದ ಮಲ್ಲಿಕಾರ್ಜುನ ಅಲಿಪುರ ಮನೆ ಮೇಲೆ ದಾಳಿ ಮಾಡಿದ್ದು, ಅಕ್ರಮ ಸಂಪಾದನೆ ಇತರ ಆರೋಪಗಳ ಅಡಿಯಲ್ಲಿ ಲೋಕಾಯುಕ್ತ ಪೊಲೀಸರು ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ಅದಲ್ಲದೆ ಸಣ್ಣೂರು ಪಿಡಿಓ ರಾಮಚಂದ್ರ ಅವರಿಗೆ ಸೇರಿದ್ದು ಎನ್ನಲಾದ ಸೇಡಂ ರಸ್ತೆಯ ಮಾನಸ ರೆಸಿಡೆನ್ಸಿ ಮೇಲೆ ದಾಳಿ ಮಾಡಲಾಗಿದೆ ಅದೇ ರೀತಿಯಾಗಿ ವಿಜಯಪುರ ಜಿಲ್ಲೆಯ ಬೊಮ್ಮನಹಳ್ಳಿ ಗ್ರಾಮದ ಮನೆ ಮೇಲೆ ದಾಳಿ ಮಾಡಲಾಗಿದೆ.

ಶಿವಮೊಗ್ಗದಲ್ಲೂ ದಾಳಿ:

ಇನ್ನೂ ಲೋಕಾಯುಕ್ತ ಎಸ್ಪಿ ಎಂ.ಹೆಚ್.ಮಂಜುನಾಥ್‌ ಚೌಧರಿ ನೇತೃತ್ವದ ಟೀಂ, ಶಿವಮೊಗ್ಗ, ಶಿಕಾರಿಪುರ ಹಾಗೂ ಹೊಸನಗರದಲ್ಲಿ ದಾಳಿ ನಡೆಸಿದೆ. ಸಾವಯವ ಕೃಷಿ ವಿಭಾಗದ ಸಹ ಸಂಶೋಧನಾ ನಿರ್ದೇಶಕರು, ಸಹ ಸಂಶೋಧನಾ ನಿರ್ದೇಶಕ ಡಾ ಎಸ್.ಪ್ರದೀಪ್ ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ದಾಳಿ:

ಚಿಕ್ಕಮಗಳೂರಿನಲ್ಲೂ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ನಗರಸಭೆ ಲೆಕ್ಕಾಧಿಕಾರಿ ಲತಾಮಣಿ ನಿವಾಸದ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಗದಗ ಶಹರ ಠಾಣೆ ಸಿಪಿಐ ಡಿಬಿ ಪಾಟೀಲ್ಗೆ ಲೋಕಾಯುಕ್ತ ಶಾಕ್:

ಗದಗ ಶಹರ ಠಾಣೆ ಸಿಪಿಐ ಡಿಬಿ ಪಾಟೀಲ್ಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಇನ್ಸ್ಪೆಕ್ಟರ್ ಪಾಟೀಲ್ ಅವರ ಗದಗದ ಶಿವಾನಂದ ನಗರದ ನಿವಾಸ ಹಾಗೂ ಕಚೇರಿ ಮೇಲೆ ದಾಳಿ ನಡೆದಿದೆ. ಅಲ್ಲದೆ, ಅವರ ಬಾಗಲಕೋಟೆ, ಜಮಖಂಡಿಯಲ್ಲಿರುವ ಮನೆಗಳ ಮೇಲೂ ದಾಳಿ ನಡೆದಿದೆ. ಕೆರೂರಿನಲ್ಲಿರುವ ಮನೆ ಮೇಲೂ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಲಾಗಿದೆ. ಲೋಕಾಯುಕ್ತರು ಸಿಪಿಐ ವಾಹನವನ್ನೂ ಬಿಡದೆ ತಪಾಸಣೆ ಮಾಡಿದ್ದಾರೆ. ಲೋಕಾಯುಕ್ತ ಎಸ್ಪಿ ಹಣಮಂತರಾಯ, ಡಿವೈಎಸ್ಪಿ ವಿಜಯ ಬಿರಾದಾರ, ಪುಷ್ಪಲತಾ ಮಾರ್ಗದರ್ಶನದಲ್ಲಿ, ಇನ್ಸ್‌ಪೆಕ್ಟರ್ ಗಳಾದ ತೇಲಿ ಹಾಗೂ ಕವಟಗಿ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ಪ್ರಗತಿಯಲ್ಲಿದೆ.

ಬೆಂಗಳೂರಿನಲ್ಲೂ ದಾಳಿ:

ಬಿಬಿಎಂಪಿ ಎಕ್ಸಿಕ್ಯೂಟಿವ್ ಎಂಜಿನಿಯರ್ ಪ್ರಕಾಶ್ ಅವರಿಗೆ ಸೇರಿದ ಕಚೇರಿ, ಹಾಗೂ ಮನೆ ಮೇಲೂ ಲೋಕಾ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸಿದೆ. ನಾಗರಬಾವಿ, ಗೋವಿಂದರಾಜನಗರ,ಯಲಹಂಕ ಭಾಗಗಳಲ್ಲಿರುವ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿ ಪರಿಶೀಲನೆ ಮಾಡುತ್ತಿದೆ.


Spread the love

LEAVE A REPLY

Please enter your comment!
Please enter your name here