ಕೆಜಿಎಫ್ ಬಾಬುಗೆ ಲೋಕಾಯುಕ್ತ ಪೊಲೀಸರ ನೋಟಿಸ್..! ಯಾಕೆ ಗೊತ್ತಾ..?

0
Spread the love

ಬೆಂಗಳೂರು: ಸಚಿವ ಜಮೀರ್ ಅಹ್ಮದ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆ ನಡೆಯುತ್ತಿದ್ದು, ಈ ಸಂಬಂಧ  ವಿಚಾರಣೆಗೆ ಹಾಜರಾಗುವಂತೆ ಕೆಜಿಎಫ್ ಬಾಬುಗೆ  ಲೋಕಾಯುಕ್ತ ಪೊಲೀಸರು ನೋಟಿಸ್​ ಜಾರಿ ಮಾಡಿದ್ದಾರೆ.

Advertisement

ಸಚಿವ ಜಮೀರ್ ಅಹ್ಮದ್​​ಗೆ 2013 ರಲ್ಲಿ ಕೆಜಿಎಫ್ ಬಾಬು 3.70 ಕೋಟಿ ಸಾಲ ನೀಡಿದ್ದರು ಎನ್ನಲಾಗ್ತಿದೆ. ಜಮೀರ್​ ಖಾನ್ ಮನೆ ಖರೀದಿ ವೇಳೆ ಸಾಲ ನೀಡಲಾಗಿದೆ ಎನ್ನಲಾಗ್ತಿದೆ. ಜೊತೆಗೆ ಹಣವನ್ನ ಯಾವ ಯಾವ ಕಾರಣಕ್ಕಾಗಿ‌ ನೀಡಿದ್ದೀರಿ, ಇಬ್ಬರ ನಡುವಿನ ವ್ಯವಹಾರಗಳೇನು ಎಂದು ವಿಚಾರಣೆ ನಡೆಯಲಿದೆ.

ದಾಖಲೆ ಸಮೇತ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ನೋಟಿಸ್​ ಜಾರಿ ಮಾಡಿದೆ. ನೋಟಿಸ್ ತಲುಪಿದ 7 ದಿನಗಳೊಳಗೆ ಹಾಜರಾಗಲು ಸೂಚಿಸಲಾಗಿದೆ. ಇದೇ ಪ್ರಕರಣದಲ್ಲಿ ನಟಿ ರಾಧಿಕಾ ಕುಮಾರಸ್ವಾಮಿ ಅವರನ್ನು ಕೂಡ ಲೋಕಾಯುಕ್ತ ಪೊಲೀಸರು ವಿಚಾರಣೆ ಮಾಡಿದ್ದರು.


Spread the love

LEAVE A REPLY

Please enter your comment!
Please enter your name here