ಕೂಡ್ಲಿಗಿ:- ಚಲಿಸುತ್ತಿರುವಾಗಲೇ ಲಾರಿ ಪಲ್ಟಿ ಹೊಡೆದು, ನಡುರಸ್ತೆಯಲ್ಲೇ ಬೆಂಕಿಗಾಹುತಿಯಾಗಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಶಿವಪುರ ಗ್ರಾಮದಲ್ಲಿ ಜರುಗಿದೆ. ಹೊಸಪೇಟೆ ಮಾರ್ಗವಾಗಿ ಚಿತ್ರದುರ್ಗದತ್ತ ಲಾರಿ ಚಲಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಶೇಂಗಾ ಹೊತ್ತು ಹೊರಟಿದ್ದ ಲಾರಿಯು, ಮೊದಲಿಗೆ ಏಕಾಏಕಿ ಪಲ್ಟಿಯಾಗಿದೆ. ರಸ್ತೆಗೆ ಲಾರಿ ಬೀಳ್ತಿದ್ದಂತೆ ಡೀಸೆಲ್ ಟ್ಯಾಂಕ್ ಒಡೆದಿದೆ. ಬಳಿಕ ಬೆಂಕಿಯ ಕಿಡಿ ಹೊತ್ತಿಕೊಂಡು ಲಾರಿ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಇನ್ನೂ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೂಡ್ಲಿಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.



