ಇನೋವಾ ಕಾರಿಗೆ ಲಾರಿ ಡಿಕ್ಕಿ: ಪವಾಡ ರೀತಿಯಲ್ಲಿ ಪಾರಾದ ಪ್ರಯಾಣಿಕರು!

0
Spread the love

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು, ಪವಾಡ ಎಂಬ ರೀತಿಯಲ್ಲಿ ಪ್ರಯಾಣಿಕರು ಪಾರಾಗಿದ್ದಾರೆ.

Advertisement

ವೇಗವಾಗಿ ಬಂದ ಲಾರಿ, ಇನೋವಾ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ನೆಲಮಂಗಲದ ಮಾದನಾಯಕನಹಳ್ಳಿ ಬಳಿ ಸಂಭವಿಸಿದ ಅಪಘಾತದಲ್ಲಿ ಕಾರಿನಲ್ಲಿದ್ದವರು ಪವಾಡ ರೀತಿಯಲ್ಲಿ ಪಾರಾಗಿದ್ದಾರೆ. ಘಟನೆ ಹಿನ್ನೆಲೆ ನೆಲಮಂಗಲ ಮಾದನಾಯಕನಹಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಾಮ್ ಉಂಟಾಗಿತ್ತು.

ನೆಲಮಂಗಲ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.


Spread the love

LEAVE A REPLY

Please enter your comment!
Please enter your name here