ಸರ್ಕಾರಿ ಬೊಕ್ಕಸಕ್ಕೆ ಲಕ್ಷ-ಲಕ್ಷ ನಷ್ಟ: ಇಬ್ಬರು ಪಿಡಿಓ ಸಸ್ಪೆಂಡ್!

0
Spread the love

ರಾಯಚೂರು:- ಕಾಮಗಾರಿ ಹಾಗೂ ಸಾಮಗ್ರಿಗಳ ಖರೀದಿ ಬಿಲ್‌ನಲ್ಲಿ ಲಕ್ಷ ಲಕ್ಷ ಹಣ ಗೋಲ್ಮಾಲ್‌ ಮಾಡಿದ ಆರೋಪದ ಮೇಲೆ ಇಬ್ಬರು ಪಿಡಿಓಗಳನ್ನು ಅಮಾನತು ಮಾಡಲಾಗಿದೆ. ಎಸ್, ಕರ್ತವ್ಯ ಲೋಪ ಹಾಗೂ ಸರ್ಕಾರಿ ಬೊಕ್ಕಸಕ್ಕೆ ನಷ್ಟ ಉಂಟುಮಾಡಿದ ಆರೋಪದ ಮೇಲೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಚಿಂಚೋಡಿ ಗ್ರಾಪಂ ಪಿಡಿಓ ಶಿವರಾಜ ಹಾಗೂ ಲಿಂಗಸುಗೂರು ತಾಲೂಕಿನ ಕೋಠಾ ಗ್ರಾಪಂ ಪಿಡಿಓ ಗಂಗಮ್ಮ ಇಬ್ಬರನ್ನೂ ಅಮಾನತುಗೊಳಿಸಿ ರಾಯಚೂರು ಜಿಪಂ ಸಿಇಓ ಪಾಂಡ್ವೇ ರಾಹುಲ್ ತುಕಾರಾಮ್ ಆದೇಶ ಹೊರಡಿಸಿದ್ದಾರೆ.

Advertisement

ಗಂಗಮ್ಮ ಅಮಾನತು:

ಪಿಡಿಓ ವಿರುದ್ಧ 15ನೇ ಹಣಕಾಸು ಯೋಜನೆಯಲ್ಲಿ 26,71,303 ರೂ. ದುರುಪಯೋಗ ಆರೋಪ ಕೇಳಿಬಂದಿತ್ತು. ಕಾಮಗಾರಿಗಳ ಬಿಲ್ ಹಾಗೂ ಸಾಮಗ್ರಿಗಳ ಖರೀದಿ ಬಿಲ್‌ಗಳಲ್ಲಿ ವ್ಯತ್ಯಾಸ ಮಾಡಿ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ ಎನ್ನಲಾಗಿತ್ತು. ಈ ಹಿನ್ನೆಲೆ ಗಂಗಮ್ಮರನ್ನ ಅಮಾನತು ಮಾಡಲಾಗಿದೆ.

ಶಿವರಾಜ ಅಮಾನತು:

ದೇವದುರ್ಗ ತಾಲೂಕಿನ ಚಿಂಚೋಡಿ ಗ್ರಾಪಂ ಪಿಡಿಓ ಶಿವರಾಜ, 52.81 ಲಕ್ಷ ಮೊತ್ತದ ಅಪೂರ್ಣ ದಾಖಲೆ ನೀಡಿದ್ದ. ಉಳಿದ 14.77 ಲಕ್ಷ ಮೌಲ್ಯದ ಹಣ ಬಳಕೆಗೆ ದಾಖಲೆ ಕೊಟ್ಟಿರಲಿಲ್ಲ. ಹೀಗಾಗಿ ಕ್ರಿಯಾಯೋಜನೆಯ ಮೊತ್ತಕ್ಕಿಂತ ಹೆಚ್ಚು ಹಣ ಪಾವತಿಸಿ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ ಆರೋಪದ ಮೇಲೆ ಶಿವರಾಜನನ್ನ ಅಮಾನತುಗೊಳಿಸಲಾಗಿದೆ.


Spread the love

LEAVE A REPLY

Please enter your comment!
Please enter your name here