ಎಂಬಿಬಿಎಸ್ ವಿದ್ಯಾರ್ಥಿನಿ ಜೊತೆ ಲವ್: ವಾರ್ನ್​ ಮಾಡಿದ್ರೂ ಯುವತಿ ಹಿಂದೆ ಬಿದ್ದ ಯುವಕನ ಕೊಲೆ!

0
Spread the love

ದೇವನಹಳ್ಳಿ:- ತನಗಿಂತ ಎರಡು ವರ್ಷ ದೊಡ್ಡವಳಾಗಿದ್ದ MBBS ವಿದ್ಯಾರ್ಥಿನಿ ಯೊಂದಿಗೆ ಲವ್ವಲ್ಲಿ ಬಿದ್ದಿದ್ದ ಯುವಕನನ್ನು ಕಿಡ್ನ್ಯಾಪ್ ಮಾಡಿ ದುಷ್ಕರ್ಮಿಗಳು ಹತ್ಯೆ ಮಾಡಿರುವಂತಹ ಘಟನೆ ದೇವನಹಳ್ಳಿ ತಾಲೂಕಿನ ನೀರಗುಂಟೆಪಾಳ್ಯ ಗ್ರಾಮದಲ್ಲಿ ಜರುಗಿದೆ.

Advertisement

19 ವರ್ಷದ ಪ್ರೀತಂ ಕೊಲೆಯಾದ ಯುವಕ. ಮೃತ ಯುವಕ ಪ್ರೀತಂ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ತನಗಿಂತ 2 ವರ್ಷ ದೊಡ್ಡವಳಾದ ಯುವತಿಯನ್ನು ಪ್ರೀತಿ ಮಾಡುತ್ತಿದ್ದ. ಯುವತಿ ಎಂಬಿಬಿಎಸ್​ ಓದುತ್ತಿದ್ದಳು. ಪ್ರೀತಿ ವಿಚಾರ ತಿಳಿದು ಯುವಕನಿಗೆ ಯುವತಿ ಸಂಬಂಧಿಕರು ವಾರ್ನ್ ಮಾಡಿದ್ದರು.

ವಾರ್ನಿಂಗ್​ ಮಾಡಿದರೂ ಯುವತಿಯನ್ನು ಪ್ರೀತಂ ಪ್ರೀತಿ ಮಾಡುತ್ತಿದ್ದ. ಈ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ ಪ್ರೀತಂ ನನ್ನು ಕಿಡ್ನ್ಯಾಪ್​ ಮಾಡಿ ಹತ್ಯೆ ಮಾಡಲಾಗಿದೆ. ಯುವತಿ ಚಿಕ್ಕಮ್ಮನ ಮಗ ಶ್ರೀಕಾಂತ್ ಮತ್ತು ಸಹಚರರಿಂದ ಕಿಡ್ನ್ಯಾಪ್ ಮಾಡಲಾಗಿದ್ದು, ಕಂಠಪೂರ್ತಿ ಕುಡಿದು 4-5 ಜನರು ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಈ ವೇಳೆ ಪ್ರೀತಂ ಸಾವು ಹಿನ್ನೆಲೆ ಶವ ಬಿಸಾಕಿ ಆರೋಪಿಗಳು ಎಸ್ಕೇಪ್ ಆಗಿರುವ ಆರೋಪ ಕೇಳಿಬಂದಿದೆ.

ಇತ್ತ ಬೆಳೆದು ನಿಂತಿದ್ದ ಮಗನನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಪೊಲೀಸ್ ಠಾಣೆ ಮುಂದೆ ತಾಯಿ ಮತ್ತು ಸಂಬಂಧಿಕರು ಕಣೀರು ಹಾಕಿದ್ದಾರೆ. ಯುವಕನ ಸಾವಿಗೆ ನ್ಯಾಯ ಕೊಡಿಸುವಂತೆ ಒತ್ತಾಯಿಸಲಾಗಿದೆ.


Spread the love

LEAVE A REPLY

Please enter your comment!
Please enter your name here