HomeGadag Newsಗ್ರಾಮಾಭಿವೃದ್ಧಿಗೆ ಕೆಳಹಂತದ ವಾರ್ಷಿಕ ಯೋಜನೆ ಸಹಕಾರಿ: ಡಾ. ಯತೀಂದ್ರ ಸಿದ್ಧರಾಮಯ್ಯ

ಗ್ರಾಮಾಭಿವೃದ್ಧಿಗೆ ಕೆಳಹಂತದ ವಾರ್ಷಿಕ ಯೋಜನೆ ಸಹಕಾರಿ: ಡಾ. ಯತೀಂದ್ರ ಸಿದ್ಧರಾಮಯ್ಯ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಗ್ರಾಮಾಭಿವೃದ್ಧಿಗೆ ಕೆಳ ಹಂತದ ವಾರ್ಷಿಕ ಯೋಜನೆಗಳು ಅತ್ಯಂತ ಸಹಕಾರಿಯಾಗಿವೆ. ವಿಕೇಂದ್ರೀಕರಣ ವ್ಯವಸ್ಥೆಯಿಂದ ಹಾಗೂ ಸರಿಯಾದ ಯೋಜನೆಗಳಿಂದ ಮಹತ್ತರ ಅಭಿವೃದ್ಧಿ ಸಾಧನೆ ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ಧರಾಮಯ್ಯ ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಶನಿವಾರ ಆಯೋಜಿಸಲಾಗಿದ್ದ ಕೆಳಹಂತದ ಯೋಜನೆಗಳೊಂದಿಗೆ ವಾರ್ಷಿಕ ಜಿಲ್ಲಾ ಅಭಿವೃದ್ಧಿ ಯೋಜನೆಯನ್ನು ತಯಾರಿಸುವ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.

ಸಂತ ರಾಜಕಾರಣಿ, ಮಾಜಿ ಶಾಸಕ ಡಿ.ಆರ್. ಪಾಟೀಲರು ವಿಕೇಂದ್ರೀಕರಣ ವ್ಯವಸ್ಥೆಯಲ್ಲಿ ಅಪಾರ ಅನುಭವ ಹಾಗೂ ಅಭಿವೃದ್ಧಿಯ ಮುಂದಾಲೋಚನೆ ಉಳ್ಳವರಾಗಿದ್ದರಿಂದ ನನ್ನ ತಂದೆಯವರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿ.ಆರ್. ಪಾಟೀಲರನ್ನು ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರನ್ನಾಗಿ ಮಾಡಿದ್ದಾರೆ ಎಂದರು.

ಡಿ.ಆರ್. ಪಾಟೀಲರ ಅಪಾರ ಅನುಭವದಿಂದ ವಿಕೇಂದ್ರೀಕರಣ ವ್ಯವಸ್ಥೆ ಹಾಗೂ ಯೋಜನೆ ತಯಾರಿಕೆ ಕರಡು ಪ್ರತಿ ಇಗಾಗಲೇ ಗದಗ ಜಿಲ್ಲೆಯಲ್ಲಿ ಸಿದ್ಧವಾಗಿದೆ. ಇದೇ ರೀತಿ ಮೈಸೂರಿನಲ್ಲಿ ಸಹ ಅಭಿವೃದ್ಧಿ ಯೋಜನೆಯ ಕರಡು ತಯಾರಿಸಲಾಗುವುದು ಎಂದು ಹೇಳಿದರು.

ವಾರ್ಡ್, ಗ್ರಾಮ ಮಟ್ಟದಲ್ಲಿ ಸಭೆ ನಡೆಸಿ ತಮ್ಮ ಗ್ರಾಮದಲ್ಲಿ ಅಗತ್ಯವಾದ ಅಭಿವೃದ್ಧಿ ಕೆಲಸಗಳ ಕುರಿತು ಯೋಜನಾ ವರದಿ ಕರಡು ಸಿದ್ಧಪಡಿಸಿ, ತಾ.ಪಂ, ಜಿ.ಪಂ ಮೂಲಕ ಸರ್ಕಾರಕ್ಕೆ ಕಳುಹಿಸಿ ಆದ್ಯತೆಯ ಆಧಾರದಲ್ಲಿ ಗ್ರಾಮಗಳ ಯೋಜನೆಗಳ ಅನುಷ್ಠಾನಕ್ಕೆ ಇದು ಸಹಕಾರಿ ಆಗಲಿದೆ. ಇದೊಂದು ಉತ್ತಮ ಕಾರ್ಯವಾಗಿದೆ ಎಂದು ಡಾ. ಯತೀಂದ್ರ ಸಿದ್ಧರಾಮಯ್ಯ ಅಭಿಪ್ರಾಯಪಟ್ಟರು.

ಕಾರ್ಯಾಗಾರದಲ್ಲಿ ಹುಬ್ಬಳ್ಳಿಯ ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ, ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ, ಜಿ.ಪಂ ಮಾಜಿ ಅಧ್ಯಕ್ಷ ವಾಸಣ್ಣ ಕುರಡಗಿ, ಅಶೋಕ ಮಂದಾಲಿ, ಸುಜಾತ ದೊಡ್ಮನಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿ.ಪಂ ಉಪ ಕಾರ್ಯದರ್ಶಿ ಸಿ.ಆರ್. ಮುಂಡರಗಿ, ಎ.ಎ. ಕಂಬಾಳಿಮಠ, ಎಂ.ವಿ. ಚಳಗೇರಿ ಸೇರಿದಂತೆ ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು, ಪಿಡಿಓಗಳು ಇದ್ದರು.

ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಡಿ.ಆರ್. ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿ, ವಿಕೇಂದ್ರೀಕರಣ ವ್ಯವಸ್ಥೆ ಗ್ರಾಮ ಮಟ್ಟದಿಂದ ಬಲವರ್ಧನೆಯಾಗಬೇಕು. ಆಗ ಮಾತ್ರ ಗ್ರಾಮಗಳು ಅಭಿವೃದ್ಧಿಯೊಂದಿಗೆ ಆರ್ಥಿಕ ಸದೃಢತೆ ಸಾಧಿಸಲಿವೆ. ರಾಜ್ಯದ ಎಲ್ಲ ಗ್ರಾಮಗಳಲ್ಲೂ ಸಹ ವಾರ್ಷಿಕ ಅಭಿವೃದ್ಧಿ ಯೋಜನೆಗಳ ಕರಡು ಪ್ರತಿ ತಯಾರಿಸಿ ಮುಂದಿನ ಹಂತಕ್ಕೆ ಕಳುಹಿಸಿಕೊಡಬೇಕು. ಅದನ್ನು ಸಹ ನಿಗದಿಪಡಿಸಿದ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!