ಬೆಂಗಳೂರು:- ರಾಜ್ಯದ ಪ್ರಭಾರ ಡಿಜಿ & ಐಜಿಪಿಯಾಗಿ ಎಂ.ಎ.ಸಲೀಂ ನೇಮಕ ಮಾಡಿ ಇಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
Advertisement
ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿದ್ದ ಅಲೋಕ್ ಮೋಹನ್ ಅವರು ಏ.30ರಂದು ನಿವೃತ್ತರಾಗಿದ್ದರು. ಮೇ 21 ರ ವರೆಗೆ ಅವರ ಅವಧಿಯನ್ನು ಸರ್ಕಾರ ವಿಸ್ತರಿಸಿತ್ತು. ಕೇಂದ್ರ ಲೋಕಸೇವಾ ಆಯೋಗದಿಂದ ಮೂವರು ಶಾರ್ಟ್ ಲಿಸ್ಟ್ ಬಾರದ ಹಿನ್ನೆಲೆ ಪೂರ್ಣಾವಧಿ ಡಿಜಿ/ಐಜಿಪಿ ಆದೇಶ ಮಾಡದೇ ಸರ್ಕಾರ ಹೆಚ್ಚುವರಿ ಹೊಣೆ ಆದೇಶ ಮಾಡಿದೆ. ತಾಂತ್ರಿಕ ಸಮಸ್ಯೆ, ಕಾನೂನು ಅಡ್ಡಿ ಹಿನ್ನೆಲೆಯಲ್ಲಿ ಸರ್ಕಾರ ಜಾಣ ನಡೆ ಅನುಸರಿಸಿದೆ.
ಡಾ. ಎಂ ಎ ಸಲೀಂ ಅವರು 1993ನೇ ಸಾಲಿನ ಕರ್ನಾಟಕ ಕೇಡರ್ನ ಅಧಿಕಾರಿಯಾಗಿದ್ದಾರೆ. ಡಾ. ಎಂ ಎ. ಸಲೀಂ ಅವರು ಈ ಹಿಂದೆ ಕಲಬುರಗಿಯಲ್ಲಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಕುಶಾಲನಗರ ಉಪ ವಿಭಾಗದಲ್ಲಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು ಎನ್ನಲಾಗಿದೆ.


