ಭಾರತ ಮತ್ತು ಪಾಕಿಸ್ತಾನದ ನಡುವೆ ಮುಂದುವರಿದ ಬಿಕ್ಕಟ್ಟು: ರಾಜ್ಯದ 3 ಜಿಲ್ಲೆಗಳಲ್ಲಿ ನಾಳೆ ಮಾಕ್ ಡ್ರಿಲ್ʼಗೆ ನಿರ್ಧಾರ

0
Spread the love

ಬೆಂಗಳೂರು: ಯುದ್ಧ.. ಭಾರತ-ಪಾಕಿಸ್ತಾನ ನಡುವೆ ಯುದ್ಧ ಕಾರ್ಮೋಡ ದಟ್ಟವಾಗಿ ಆವರಿಸ್ತಿದೆ. ಉಗ್ರರು ಪಹಲ್ಗಾಮ್ನಲ್ಲಿ 26 ಹಿಂದೂಗಳ ನರಮೇಧ ಮಾಡ್ತಿದ್ದಂತೆ ಎರಡೂ ದೇಶಗಳ ನಡುವಿನ ಉದ್ವಿಗ್ನತೆ ಹೆಚ್ಚಾಗಿದೆ. ಜಮ್ಮು-ಕಾಶ್ಮೀರ, ಪಂಜಾಬ್, ಹರಿಯಾಣ ಸೇರಿದಂತೆ ಪಾಕಿಸ್ತಾನದ ಜೊತೆ ಗಡಿ ಹಂಚಿಕೊಂಡಿರುವ ರಾಜ್ಯಗಳ ಜಿಲ್ಲೆಗಳಲ್ಲಿ ಮಾಕ್ ಡ್ರಿಲ್ ನಡೆಯಲಿದೆ.

Advertisement

ಅದರ ಜೊತೆಗೆ ದೇಶದ ಪ್ರಮುಖ ವಾಣಿಜ್ಯ ನಗರ ಮತ್ತು ನೌಕಾನೆಲೆ, ಸ್ಥಾವರಗಳನ್ನು ಹೊಂದಿರುವ ಜಿಲ್ಲೆಗಳಲ್ಲೂ ಯುದ್ಧ ಕವಾಯತು ನಡೆಯುವ ಸಾಧ್ಯತೆ ಇದೆ. ಕರ್ನಾಟಕದ ವಿಚಾರಕ್ಕೆ ಬಂದರೆ.. ಮೂರು ಜಿಲ್ಲೆಗಳಲ್ಲಿ ಮಾಕ್ ಡ್ರಿಲ್ ಸಾಧ್ಯತೆ ಇದೆ.

ಬೆಂಗಳೂರು, ಕಾರವಾರ ಮತ್ತು ರಾಯಚೂರಿನಲ್ಲಿ ನಾಳೆ ಮಾಕ್ ಡ್ರಿಲ್ಗೆ ನಿರ್ಧರಿಸಲಾಗಿದೆ ಎಂದು ಅಗ್ನಿಶಾಮಕ ದಳದ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್ ಹೇಳಿದ್ದಾರೆ. ಈ ಬಗ್ಗೆ ಕೇಂದ್ರ ಸರ್ಕಾರದಿಂದ ಸುತ್ತೋಲೆ ಬರುತ್ತದೆ ಎಂದಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅಗ್ನಿಶಾಮಕ ದಳದ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್, ಬೆಂಗಳೂರು, ಕಾರವಾರ, ರಾಯಚೂರಿನಲ್ಲಿ ನಾಳೆ ಸಂಜೆ 4 ಗಂಟೆ ಮಾಕ್ಡ್ರಿಲ್ಗೆ ನಿರ್ಧಾರ ಮಾಡಿದ್ದೇವೆ. ಈ ಕುರಿತಾಗಿ ಈಗಾಗಲೇ ಅಗ್ನಿಶಾಮಕದಳ, ಸಿವಿಲ್ ಡಿಫೆನ್ಸ್ ಅಧಿಕಾರಿಗಳ ಜತೆ ಸಭೆ ಮಾಡಲಾಗಿದೆ‌ ಎಂದು ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here