ಧಾರವಾಡ: ಧಾರವಾಡ ನಗರದ ಶಿರಡಿ ನಗರ ಪ್ರದೇಶದಲ್ಲಿ ಹುಚ್ಚು ನಾಯಿಯೊಂದು ದಾಳಿ ನಡೆಸಿದ ಪರಿಣಾಮ, ಒಟ್ಟು 9 ಮಂದಿ ಗಾಯಗೊಂಡಿದ್ದಾರೆ. ಬಡಾವಣೆಯಲ್ಲಿ ಅಲೆದಾಡಿದ ನಾಯಿ ಜನರ ಮೇಲೆ ಏಕಾಏಕಿ ದಾಳಿ ನಡೆಸಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಘಟನೆಯಲ್ಲಿ ಶಾಲೆಯಿಂದ ಮರಳುತ್ತಿದ್ದ ರಿಶೀಕ್ ಎಂಬ ಬಾಲಕನಿಗೆ ಕಿವಿಯಲ್ಲಿ ಗಂಭೀರ ಗಾಯವಾಗಿದೆ. ಗಂಗವ್ವ ಉಪ್ಪಾರ, ಲಕ್ಷ್ಮೀ ಮಾದರ, ಶೀತಲ ಕಬಾಡಿ ಸೇರಿದಂತೆ ಇನ್ನಿತರರು ನಾಯಿ ಕಡಿತಕ್ಕೆ ಒಳಗಾಗಿದ್ದಾರೆ. ಎಲ್ಲ ಗಾಯಾಳುಗಳನ್ನು ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ನಾಯಿಯ ನಿರಂತರ ದಾಳಿಯಿಂದ ಭಯಭೀತರಾದ ಸ್ಥಳೀಯರು, ಆತ್ಮರಕ್ಷಣೆಗಾಗಿ ನಾಯಿಯನ್ನು ಹಿಡಿದು ಕೊಂದು ಹಾಕಿದ್ದಾರೆ. ಘಟನೆ ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.



