ಮಾಘ ಹುಣ್ಣಿಮೆ ಸಂಭ್ರಮ: ನಿಮಿಷಾಂಭ ದೇವಾಲಯಕ್ಕೆ ಹರಿದು ಬಂದ ಭಕ್ತರ ದಂಡು!

0
Spread the love

ಮಂಡ್ಯ:- ಮಾಘ ಹುಣ್ಣಿಮೆ ಸಂಭ್ರಮ ಹಿನ್ನೆಲೆ ಜಿಲ್ಲೆಯ ನಿಮಿಷಾಂಭ ದೇವಾಲಯಕ್ಕೆ ಭಕ್ತರ ದಂಡು ಹರಿದು ಬಂದಿದೆ.

Advertisement

ಇಂದು ಕಾವೇರಿ ನದಿಯಲ್ಲಿ ಮಾಘ ಸ್ನಾನ ಮಾಡಿ ನಿಮಿಷಾಂಭ ದೇವಿ ದರ್ಶನ ಮಾಡಿದರೆ ಪುಣ್ಯ ಲಭಿಸುತ್ತದೆ ಎಂಬ ಪ್ರತೀತಿಯಿದೆ. ಹೀಗಾಗಿ ಮಧ್ಯರಾತ್ರಿಯಿಂದಲೇ ಕಾವೇರಿಯಲ್ಲಿ ಸಹಸ್ರಾರು ಭಕ್ತರು ಮಿಂದೇಳುತ್ತಿದ್ದಾರೆ.

ಮಂಡ್ಯ ಮಾತ್ರವಲ್ಲದೆ ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದಲೂ ಭಕ್ತರ ಆಗಮಿಸುತ್ತಿದ್ದು, ಕಾವೇರಿ ನದಿಯಲ್ಲಿ ಪುಣ್ಯ ಸ್ನಾನ ಮಾಡಿ ನಿಮಿಷಾಂಭೆಗೆ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಮಧ್ಯರಾತ್ರಿ 12 ಗಂಟೆಯಿಂದಲೇ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯ ಆರಂಭವಾಗಿದ್ದು, ಪಂಚಾಮೃತ ಅಭಿಷೇಕ ಸೇರಿದಂತೆ ವಿವಿಧ ಅಭಿಷೇಕ ನೇರವೇರಿದೆ.

ಕಾವೇರಿ ಸ್ನಾನಕ್ಕೆ ಆಗಮಿಸಲಿರುವ ಭಕ್ತರಿಗೆ ದಿನವಿಡೀ ಪ್ರಸಾದ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಪೊಲೀಸರ ನಿಯೋಜನೆ ಮಾಡಲಾಗಿದೆ.


Spread the love

LEAVE A REPLY

Please enter your comment!
Please enter your name here