HomeGadag Newsಬಡವರ ಹಸಿವು ನೀಗಿಸುವ ಪ್ರಯತ್ನ ಮಾಡಿ: ಅಶೋಕ ಮಂದಾಲಿ

ಬಡವರ ಹಸಿವು ನೀಗಿಸುವ ಪ್ರಯತ್ನ ಮಾಡಿ: ಅಶೋಕ ಮಂದಾಲಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಸೆಪ್ಟೆಂಬರ್ 2025ರ ಮಾಹೆಯವರೆಗೆ ತಲಾ 2 ಸಾವಿರ ರೂ.ಗಳಂತೆ ಗದಗ ತಾಲೂಕಿನ 79125 ಫಲಾನುಭವಿಗಳಿಗೆ 15.82 ಕೋಟಿ ಮೊತ್ತವನ್ನು ಪಾವತಿ ಮಾಡಲಾಗಿದೆ ಎಂದು ಗದಗ ತಾಲೂಕು ಮಟ್ಟದ ಗ್ಯಾರಂಟಿ ಯೋಜನಾ ಸಮಿತಿ ಸಭೆಯ ಅಧ್ಯಕ್ಷ ಅಶೋಕ ಮಂದಾಲಿ ತಿಳಿಸಿದರು.

ಗದಗ ಜಿಲ್ಲಾ ಪಂಚಾಯಿತಿ ವಿ.ಸಿ ಹಾಲ್‌ನಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪಂಚ ಗ್ಯಾರಂಟಿ ಯೋಜನೆಗಳು ಬಡಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಉದ್ದೇಶ ಹೊಂದಿದ್ದು, ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯ ನಿಗದಿತ ಸಮಯದಲ್ಲೇ ದೊರಕುವಂತಾಗಬೇಕು. ಪಂಚ ಗ್ಯಾರಂಟಿ ಯೋಜನೆಗಳ ಗುರಿ ಸಾಧನೆ ಶೇ. 100ರಷ್ಟಾಗಲು ಸಂಬಂಧಿತ ಅಧಿಕಾರಿಗಳು ವಿಶೇಷ ಆಸಕ್ತಿ ವಹಿಸಿ ಕಾರ್ಯನಿರ್ವಹಿಸಬೇಕು ಎಂದರು.

ಗದಗ ಮತಕ್ಷೇತ್ರದಲ್ಲಿ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿರುವವರ ಪಟ್ಟಿಯನ್ನು ಗ್ಯಾರಂಟಿ ಸಮಿತಿಗೆ ಸಲ್ಲಿಸಬೇಕು. ಯಾವುದೇ ಅಮಿಷಕ್ಕೊಳಗಾಗದೇ ಬಡಜನರಿಗೆ ಹಸಿವು ನೀಗಿಸುವ ಅನ್ನಭಾಗ್ಯ ಯೋಜನೆ ಸೌಲಭ್ಯವನ್ನು ಒದಗಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡಬೇಕು. ಸಾರಿಗೆ ಸಂಸ್ಥೆಯ ಅಧಿಕಾರಿಗಳು ಗದಗ ಮತಕ್ಷೇತ್ರದಲ್ಲಿನ ಬಸ್ ನಿಲ್ದಾಣಗಳಿಗೆ ಕಾಲಕಾಲಕ್ಕೆ ಭೇಟಿ ನೀಡಿ, ಪ್ರಯಾಣಿಕರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಒದಗಿಸಲು ಶ್ರಮಿಸಬೇಕು ಎಂದು ಸೂಚನೆ ನೀಡಿದರು.

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ಎಮ್.ಎಸ್. ರಮೇಶ ಮಾತನಾಡಿ, ನವೆಂಬರ್-2025ರ ಮಾಹೆಯಲ್ಲಿ ಗದಗ ಶಹರದಲ್ಲಿ ರಾಜ್ಯ ಸರ್ಕಾರ ಅನ್ನಭಾಗ್ಯ ಅಕ್ಕಿ ಹಂಚಿಕೆಯಡಿ ಒಟ್ಟು 31759 ಕಾರ್ಡ್‌ದಾರರಿಗೆ 5201.65 ಕ್ವಿಂಟಲ್ ಅಕ್ಕಿ ಹಂಚಿಕೆ ಮಾಡಲಾಗಿದೆ. ಎನ್‌ಎಫ್‌ಎಸ್‌ಎ ಅಕ್ಕಿ ಹಂಚಿಕೆಯಡಿ (ಕೇಂದ್ರ ಸರ್ಕಾರ) 31759 ಕಾರ್ಡ್‌ದಾರರಿಗೆ 5466.35 ಕ್ವಿಂಟಲ್ ಅಕ್ಕಿ ಹಂಚಿಕೆ ಮಾಡಲಾಗಿದೆ ಎಂದು ಸಭೆಗೆ ವಿವರಿಸಿದರು.

ಗೃಹಜ್ಯೋತಿ ಯೋಜನೆಯಡಿ 30-11-2025ರವರೆಗೆ ಗದಗ ಶಹರ ವಿಭಾಗದಲ್ಲಿ 48708 ಸ್ಥಾವರಗಳು ಅರ್ಹವಾಗಿದ್ದು, 48481 ಸ್ಥಾವರಗಳ ನೋಂದಣಿಯಾಗಿವೆ. ಶೇ. 99.53ರಷ್ಟು ಸಾಧನೆಯಾಗಿದೆ. ಗದಗ ಗ್ರಾಮೀಣ ಉಪವಿಭಾಗದಲ್ಲಿ 53110 ಸ್ಥಾವರಗಳು ಅರ್ಹವಾಗಿದ್ದು, ಆ ಪೈಕಿ 52909 ಸ್ಥಾವರಗಳ ನೋಂದಣಿಯಾಗಿ, ಶೇ. 99.62ರಷ್ಟು ಸಾಧನೆಯಾಗಿದೆ ಎಂದು ಹೆಸ್ಕಾಂ ಅಧಿಕಾರಿ ಸಭೆಗೆ ತಿಳಿಸಿದರು.

ಸಭೆಯಲ್ಲಿ ತಾಲೂಕು ಗ್ಯಾರಂಟಿ ಸಮಿತಿಯ ಸದಸ್ಯರುಗಳಾದ ಶಂಭು ಕಾಳೆ, ಮೀನಾಕ್ಷಿ ಬೆನಕಣ್ಣವರ, ಸಾವಿತ್ರಿ ಹೂಗಾರ, ದಯಾನಂದ ಪವಾರ, ಸಂಗು ಕರೆಕಲಮಟ್ಟಿ, ಎನ್.ಬಿ. ದೇಸಾಯಿ, ಸಂಗಮೇಶ ಎಂ.ಹಾದಿಮನಿ, ರಮೇಶ ಹೊನ್ನಿನಾಯ್ಕರ, ದೇವರಡ್ಡಿ ತಿರ್ಲಾಪುರ, ಗಣೇಶ ಸಿಂಗ್ ಮಿಟಾಡೆ, ಮಲ್ಲಪ್ಪ ಎಚ್‌ಬಾರಕೇರ, ಭಾಷಾ ಮಲ್ಲಸಮುದ್ರ, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಮಲ್ಲಯ್ಯ ಕೊರವನವರ, ಲೀಡ್ ಬ್ಯಾಂಕ್ ಮ್ಯಾನೇಜರ್ ಸಂತೋಷ್ ಎಂ.ವಿ ಸೇರಿದಂತೆ ಗ್ಯಾರಂಟಿ ಯೋಜನೆಯ ಅಧಿಕಾರಿಗಳು ಹಾಜರಿದ್ದರು.

ಗದಗ ತಾಲೂಕು ಮಟ್ಟದ ಗ್ಯಾರಂಟಿ ಸಮಿತಿ ಸದಸ್ಯರಾದ ಕೃಷ್ಣಗೌಡ ಎಚ್.ಪಾಟೀಲ ಮಾತನಾಡಿ, ಗ್ಯಾರಂಟಿ ಯೋಜನೆಗಳ ಸೌಲಭ್ಯಗಳ ಪಾವತಿಯಲ್ಲಿ ವಿಳಂಬವಾದರೂ ಫಲಾನುಭವಿಗಳಿಗೆ ಸೌಲಭ್ಯ ಒದಗಿಸುವ ಬದ್ಧತೆ ಸರ್ಕಾರದ್ದಾಗಿದೆ. ಗ್ಯಾರಂಟಿಗಳ ಮೂಲಕ ರಾಜ್ಯದ ಬಡವರ ಆರ್ಥಿಕಾಭಿವೃದ್ಧಿಗೆ ಸಿಎಂ ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ಸದಾ ಸನ್ನದ್ಧ ಎನ್ನುವುದನ್ನು ಈಗಾಗಲೇ ಸಾಬೀತುಪಡಿಸಿದೆ. ಇದು ನಮ್ಮ ಸರ್ಕಾರದ ಬದ್ಧತೆ ಎಂದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!