ಬೆಂಗಳೂರು: ರೈತರಿಗೆ ಕಾನ್ಫಿಡೆನ್ಸ್ ಬರುವಂತೆ ಮಾಡಿ. ನಿಮ್ಮ ಊಹೆ ಮೇಲೆ ನಿರ್ಧಾರ ಮಾಡಿ ರೈತರ ಬೆಳೆ ನಷ್ಟ ಮಾಡಬೇಡಿ ಎಂದು ಕೈ ಸರ್ಕಾರದ ವಿರುದ್ದ ಕೇಂದ್ರ ಸಚಿವ ಹೆಚ್ʼಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ತುಂಗಭದ್ರಾ ಡ್ಯಾಂಗೆ 70 ವರ್ಷ ಆಗಿದೆ. ಇದು ಟಿಬಿ ಬೋರ್ಡ್ಗೆ ಬರುತ್ತದೆ. ಆಂಧ್ರ, ಕೇಂದ್ರ ಸರ್ಕಾರದ ಜವಾಬ್ದಾರಿ ಇದೆ. ಈ ಕುರಿತು ರಿಪೊರ್ಟ್ ಕೊಡೊದಕ್ಕೆ ಎಂದು ಒಂದು ಕಮಿಟಿ ಇದೆ.
122 ಟಿಎಂಸಿ ನಮ್ಮ ರಾಜ್ಯಕ್ಕೆ ಸಿಗಬೇಕು, 73 ಟಿಎಂಸಿ ನೀರು ಆಂಧ್ರಕ್ಕೆ ಸಿಗಬೇಕು. 103 ಟಿಎಂಸಿ ಈಗ ಸಿಗ್ತಿದೆ. ಇನ್ನು ದುಡ್ಡು ಕೊಟ್ಟು ಬಂದವನು ಈ ಡ್ಯಾಂ ಏನಾಗಿದೆ, ಗೇಟ್ ಏನಾಗಿದೆ ಅಂತಾ ಯಾಕೆ ನೋಡ್ತಾನೆ ಎಂದರು. ಈಗ ತರಾತುರಿಯಲ್ಲಿ ರಿಪೇರಿ ಮಾಡೋದಕ್ಕೆ ಹೋಗಿ ಮತ್ತೆ ಏನೇನೋ ಅವಾಂತರ ಆಗುವುದು ಬೇಡ, ರೈತರಿಗೆ ಕಾನ್ಫಿಡೆನ್ಸ್ ಬರುವಂತೆ ಮಾಡಿ. ನಿಮ್ಮ ಊಹೆ ಮೇಲೆ ನಿರ್ಧಾರ ಮಾಡಿ ರೈತರ ಬೆಳೆ ನಷ್ಟ ಮಾಡಬೇಡಿ ಎಂದು ಕೈ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು.