ಬೆಂಗಳೂರು:- ರಾಜಧಾನಿ ಬೆಂಗಳೂರು ಸೇರಿ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿವೆ. ಡೆಂಗ್ಯೂಗೆ ಕಡಿವಾಣ ಹಾಕಲು ಮನೆ ಮನೆ ಸರ್ವೇ ಮಾಡುತ್ತೇವೆ ಎಂದು ಹೊರಟಿದ್ದ ಬಿಬಿಎಂಪಿ, ಇದೀಗ ಇದರ ಜೊತೆಗೆ ಅರಿವು ಮೂಡಿಸುವ ಕಾರ್ಯಕ್ರಮ ಮಾಡಲು ಮುಂದಾಗಿದೆ.
ಸೋಷಿಯಲ್ ಮೀಡಿಯಾದಲ್ಲಿ ಡೆಂಗ್ಯೂ ಕುರಿತ ರೀಲ್ಸ್ಗಳನ್ನು ಆಹ್ವಾನಿಸಿರುವ ಪಾಲಿಕೆ, ಮೊದಲ ಐದು ಉತ್ತಮ ರೀಲ್ಸ್ಗಳಿ ತಲಾ 25 ಸಾವಿರ ರೂಪಾಯಿ ಬಹುಮಾನ ಘೋಷಿಸಿದೆ. ಇನ್ನು ದ್ವೀತಿಯ ಬಹುಮಾನದಲ್ಲಿ ಐದು ಜನರಿಗೆ ತಲಾ 10 ಸಾವಿರ ರೂಪಾಯಿ ನಿಗದಿ ಮಾಡಿದ್ದು, ಯಾವ ಶಾಲೆ ಹೆಚ್ಚು ವಿದ್ಯಾರ್ಥಿಗಳ ಬಳಿ ರೀಲ್ಸ್ ಮಾಡಿಸುತ್ತದೆಯೋ ಆ ಶಾಲೆಗೆ 1 ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ. ಅಲ್ಲದೇ ಮಕ್ಕಳಿಗೆ ಜಾಗೃತಿ ಮೂಡಿಸುವ ವಿಡಿಯೋ ಮಾಡಲು ಉತ್ತೇಜಿಸೋ ಶಿಕ್ಷಕಿಯರಿಗೂ 35 ಸಾವಿರ ರೂಪಾಯಿ ಬಹುಮಾನದ ಆಫರ್ ಕೊಟ್ಟಿದೆ.
ಇತ್ತ ಬಿಬಿಎಂಪಿಯ ಈ ರೀಲ್ಸ್ ಕಾಂಪಿಟೇಷನ್ಗೆ ಸಾರ್ವಜನಿಕರಿಂದ ವಿರೋಧ ಕೂಡ ವ್ಯಕ್ತವಾಗುತ್ತಿದೆ. ಪಾಲಿಕೆ ಡೆಂಗ್ಯೂ ಬಗ್ಗೆ ಅರಿವು ಮೂಡಿಸಲು ಹೊರಟಿರೋದೇನೋ ಸರಿ. ಆದ್ರೆ ನಗರದಲ್ಲಿ ಸರಿಯಾಗಿ ಸ್ವಚ್ಛತೆ ಕಾಪಾಡಬೇಕು, ಸೊಳ್ಳೆಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.