ಮೈಸೂರಿನಲ್ಲಿ ಆನೆ ಹಲ್ಲು ಸಂಗ್ರಹಿಸಿದ್ದ ವ್ಯಕ್ತಿ ಬಂಧನ

0
Spread the love

ಮೈಸೂರು: ಮನೆಯಲ್ಲಿ ಅಕ್ರಮವಾಗಿ ಆನೆ ಹಲ್ಲು ಸಂಗ್ರಹಿಸಿಟ್ಟಿದ್ದ ಆರೋಪದ ಮೇಲೆ ಮೈಸೂರಿನ ಉದಯಗಿರಿಯ ಮನೆ ಮೇಲೆ ಅರಣ್ಯ ಅಧಿಕಾರಿಗಳು ದಾಳಿ ನಡೆಸಿದ್ದು ಅಭಿರಾಮ ಸುಂದರಂ ಎಂಬಾತನನ್ನು ಬಂಧಿಸಿದ್ದಾರೆ. ಡಿಸಿಎಫ್ ಡಾ. ಬಸವರಾಜ್, ಎಸಿಎಫ್ ಲಕ್ಷ್ಮಿಕಾಂತ್,

Advertisement

ಮಾರ್ಗದರ್ಶನದಲ್ಲಿ ಆರ್ ಎಫ್ ಓ ಸುರೇಂದ್ರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ. ಹಾಗೂ ಆನೆ ದಂತ ವಶಕ್ಕೆ ಪಡೆದಿದ್ದಾರೆ. ಆನೆ ಹಲ್ಲು ಆರೋಪಿಗೆ ಎಲ್ಲಿ ದೊರೆಯಿತು, ಯಾವ ಕಾರಣಕ್ಕೆ ಸಂಗ್ರಹಿಸಿಟ್ಟಿದ್ದ ಅನ್ನುವ ಬಗ್ಗೆ ತನಿಖೆ‌ ನಡೆಯುತ್ತಿದೆ.  ವನ್ಯಜೀವಿ ಅರಣ್ಯ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here