ವ್ಯಕ್ತಿ ಮೇಲೆ ತಲ್ವಾರ್ ನಿಂದ ಅಟ್ಯಾಕ್: ಸಿಎಂ ಮಂಗಳೂರು ಪ್ರವಾಸದಲ್ಲಿದ್ದಾಗಲೇ ಕೃತ್ಯ!

0
Spread the love

ಮಂಗಳೂರು:- ಜಿಲ್ಲೆಯ ಬಂಟ್ವಾಳ ತಾಲೂಕಿನ ಅಕ್ಕರಂಗಡಿ ಬಳಿ ವ್ಯಕ್ತಿಯೊಬ್ಬರ ಮೇಲೆ ತಲ್ವಾರ್‌ನಿಂದ ದಾಳಿ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳೂರು ಪ್ರವಾಸದಲ್ಲಿದ್ದಾಗಲೇ ಈ ಅಹಿತಕರ ಘಟನೆ ನಡೆದಿದೆ.

Advertisement

ಹಮೀದ್ ಹಲ್ಲೆಗೊಳಗಾದ ವ್ಯಕ್ತಿ. ನಿನ್ನೆ ಸಂಜೆ ಅಂದ್ರೆ ಶುಕ್ರವಾರ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿದ್ದಾರೆ. ಸದ್ಯ ಹಲ್ಲೆಗೊಳಗಾಗಿರುವ ಹಮೀದ್‌ನನ್ನ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಮೇಲ್ನೋಟಕ್ಕೆ ಹ್ಯಾರಿಸ್ ಎಂಬಾತನ ಗ್ಯಾಂಗ್‌ನಿಂದ ವೈಯಕ್ತಿಕ ದ್ವೇಷಕ್ಕೆ ದಾಳಿ ನಡೆದಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಬಗ್ಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.


Spread the love

LEAVE A REPLY

Please enter your comment!
Please enter your name here