Bangalore: ತಲೆ ಮೇಲೆ ಸಿಮೆಂಟ್ ಇಟ್ಟಿಗೆ ಎತ್ತಿ ಹಾಕಿ ವ್ಯಕ್ತಿಯ ಬರ್ಬರ ಹತ್ಯೆ..!

0
Spread the love

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಕೊಲೆ ನಡೆದಿದ್ದು, ಬೆಂಗಳೂರಿನ ಮಡಿವಾಳದ ವೆಂಕಟೇಶ್ವರ ಲೇಔಟ್ ನಲ್ಲಿ ತಲೆ ಮೇಲೆ ಸಿಮೆಂಟ್ ಇಟ್ಟಿಗೆಯಿಂದ ಹೊಡೆದು ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.

Advertisement

ಮಾರ್ಟಿನ್ ಸೈಮನ್ ( 29) ಕೊಲೆಯಾದ ವ್ಯಕ್ತಿಯಾಗಿದ್ದು, ಇನ್ಫೆಂಟ್ ರಾಜ್ ಎಂಬಾತನಿಂದ‌ ಕೊಲೆ ಶಂಕೆಯಾಗಿದೆ.

ಮಾರ್ಟಿನ್ ಸೈಮನ್ ಹಾಗೂ ಶಂಕಿತ ಆರೋಪಿ ಇನ್ಪೆಂಟ್ ರಾಜ್ ಒಂದೇ ಬಿಲ್ಡಿಂಗ್‌ನಲ್ಲಿ ಬಾಡಿಗೆಗೆ ವಾಸವಾಗಿದ್ದರು. ಬಿಲ್ಡಿಂಗ್ ಟೆರೆಸ್ ಮೇಲೆ ಇಬ್ಬರೂ ಪಾರ್ಟಿ ಮಾಡುತ್ತಿದ್ದರು. ರಾತ್ರಿ ಹತ್ತು ಗಂಟೆ ವೇಳೆ ಇಬ್ಬರ ನಡುವೆ ಜಗಳ ನಡೆದಿರುವ ಅನುಮಾನವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ಈ ವೇಳೆ ಅಲ್ಲೇ ಇದ್ದ ಸಿಮೆಂಟ್ ಇಟ್ಟಿಗೆಯಿಂದ ತಲೆಗೆ ಹೊಡೆದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧ ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here