ಬೆಳಗಾವಿ:- ಉದ್ಯಮದಲ್ಲಿ ನಷ್ಟವಾದ ಹಿನ್ನೆಲೆ ಜೀವನದಲ್ಲಿ ಜಿಗುಪ್ಸೆಗೊಂಡು ಕಾರು ಸಮೇತ ನದಿಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆನಕನಹೊಳಿ ಗ್ರಾಮ ಬಳಿಯ ಘಟಪ್ರಭಾ ನದಿಯಲ್ಲಿ ಜರುಗಿದೆ.
Advertisement
45 ವರ್ಷದ ಕಿರಣ ಲಕ್ಷ್ಮಣ ನಾವಲಗಿ ಮೃತ ದುರ್ದೈವಿ. ಬ್ಯೂಟಿ ಪಾರ್ಲರ್ ಉದ್ಯಮ ನಡೆಸುತ್ತಿದ್ದ ಮೃತ ಕಿರಣ ಡಿಸೆಂಬರ್ 30 ರಂದು ಮನೆಯಲ್ಲಿ ಯಾರಿಗೂ ಹೇಳದೇ ಕಾರು ತೆಗೆದುಕೊಂಡು ತೆರಳಿದ್ದರು. ಉದ್ಯಮದಲ್ಲಿ ನಷ್ಟವಾದ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ಯಮಕನಮರಡಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿ ನದಿಯಲ್ಲಿ ಬಿದ್ದಿದ್ದ ಕಾರು ಹಾಗೂ ಶವವನ್ನು ಹೊರತೆಗೆದಿದ್ದಾರೆ.