ಬೆಂಕಿಗೆ ಬಿದ್ದು ವ್ಯಕ್ತಿ ಗಂಭೀರ: ಮೊಹರಂ ಆಚರಣೆ ವೇಳೆ ದುರಂತ!

0
Spread the love

ರಾಯಚೂರು:- ಲಿಂಗಸುಗೂರು ತಾಲೂಕಿನ ಯರಗುಂಟಿಯಲ್ಲಿ ಮೊಹರಂ ಆಚರಣೆ ವೇಳೆ ಬೆಂಕಿಗೆ ಬಿದ್ದು ವ್ಯಕ್ತಿಯೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಜರುಗಿದೆ.

Advertisement

ಹನುಮಂತ ಗಾಯಗೊಂಡ ವ್ಯಕ್ತಿ. ಹಬ್ಬದ ಸಡಗರದಲ್ಲಿದ್ದಾಗ ಅವರು ಹಲಾಯಿ ಕುಣಿಗೆ ಆಯತಪ್ಪಿ ಬಿದ್ದಿದ್ದಾರೆ. ಈ ವೇಳೆ ಗಂಭೀರ ಗಾಯಗಳಾಗಿದ್ದು, ಅವರು ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ.

ಗಾಯಾಳುವನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಲಿಂಗಸುಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

LEAVE A REPLY

Please enter your comment!
Please enter your name here