ಮಂಗಳೂರು: ಜೇನುಕೃಷಿ ತರಬೇತಿ ನೀಡುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಭೀಕರ ಘಟನೆ ಮಂಗಳೂರಿನ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.
ಬೆಳಗಾವಿ ಮೂಲದ ಅಪ್ರಾಪ್ತ ಬಾಲಕಿಯನ್ನು ಜೇನುಕೃಷಿ ಕಲಿಸುವುದಾಗಿ ಹೇಳಿ ಆರೋಪಿ ಅಬ್ದುಲ್ ಗಫೂರ್ ತನ್ನ ಮನೆಯಲ್ಲಿ ಇರಿಸಿಕೊಂಡಿದ್ದಾನೆ. ಪೋಷಕರು ಮಗಳನ್ನು ಸುಮಾರು ಎರಡು ತಿಂಗಳ ಹಿಂದೆ ಆರೋಪಿಯ ಮನೆಗೆ ಬಿಟ್ಟು ಹೋಗಿದ್ದು,
ಈ ಅವಧಿಯಲ್ಲಿ ಡಿಸೆಂಬರ್ 2ರಿಂದ 19ರವರೆಗೆ ಸುಮಾರು 17 ದಿನಗಳ ಕಾಲ ನಿರಂತರವಾಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ಘಟನೆಯ ಮಾಹಿತಿ ತಿಳಿದ ತಕ್ಷಣ ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಹಾಗೂ ಪೋಕ್ಸೋ ಕಾಯ್ದೆಯ ವಿವಿಧ ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಳಿಕ ಆರೋಪಿಯನ್ನು ಬಂಧಿಸಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ.



