ಬೆಂಗಳೂರು: ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಕೊಟ್ಟ ಹಿನ್ನಲೆ ಕುರುಬ ಸಂಘ ಸುದ್ದಿಗೋಷ್ಠಿ ಕರೆದಿದ್ದರು. ಈ ವೇಳೆ ಮಾತನಾಡುವಾಗಲೇ ಕೋಲಾರ ಕುರುಬ ಸಂಘದ ಅಧ್ಯಕ್ಷ ರವಿಚಂದ್ರ ಹೃದಯಾಘಾತದಿಂದ ಚೇರ್ ಮೇಲಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.
Advertisement
ಅಸ್ವಸ್ಥಗೊಂಡು ಕುಸಿದು ಬಿದ್ದ ಕೋಲಾರ ಕುರುಬ ಸಂಘದ ಅಧ್ಯಕ್ಷ ರವೀಂದ್ರ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ರವಿಚಂದ್ರ ಮೃತಪಟ್ಟಿದ್ದಾರೆ. ಕುರುಬ ಸಮುದಾಯದಿಂದ ಪ್ರೇಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ವೇಳೆ ಈ ಅನಾಹುತ ಸಂಭವಿಸಿದೆ.