HomeKarnataka News30 ವರ್ಷದಿಂದ ವ್ಯಕ್ತಿಯನ್ನು ಜೀತಕ್ಕೆ ಇರಿಸಿಕೊಂಡಿದ್ದ ವ್ಯಕ್ತಿ ಅರೆಸ್ಟ್!

30 ವರ್ಷದಿಂದ ವ್ಯಕ್ತಿಯನ್ನು ಜೀತಕ್ಕೆ ಇರಿಸಿಕೊಂಡಿದ್ದ ವ್ಯಕ್ತಿ ಅರೆಸ್ಟ್!

For Dai;y Updates Join Our whatsapp Group

Spread the love

ಉಡುಪಿ: ತಾಲ್ಲೂಕಿನ ಕನ್ಯಾನ ಗ್ರಾಮದ ಕಬ್ಬೈಲು ಪ್ರದೇಶದಲ್ಲಿ ಪರಿಶಿಷ್ಟ ಪಂಗಡ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಸುಮಾರು 30 ವರ್ಷಗಳ ಕಾಲ ಜೀತದಾಳಾಗಿ ಕೆಲಸ ಮಾಡಿಸಿದ್ದ ಆರೋಪದ ಮೇಲೆ ಮಹಿಳೆಯನ್ನು ಬಂಧಿಸಲಾಗಿದೆ.

65 ವಯಸ್ಸಿನ ಸಂತ್ರಸ್ತರು ಪರಿಶಿಷ್ಟ ಪಂಗಡ (ಕೊರಗ) ಸಮುದಾಯಕ್ಕೆ ಸೇರಿದವರು. ಅವರು ಸುಮಾರು 30 ವರ್ಷಗಳ ಹಿಂದೆ ಕುಂದಾಪುರದ ಹೆಮ್ಮಾಡಿ ಸಮೀಪದ ಕಬ್ಬೈಲು ನಿವಾಸಿ ಸುಬ್ಬಣ್ಣ ಶೆಟ್ಟಿ ಅವರ ಮನೆಯಲ್ಲಿ ಘರ ಕೆಲಸಕ್ಕೆ ನೇಮಕಗೊಂಡಿದ್ದರು. ಸುಬ್ಬಣ್ಣ ಶೆಟ್ಟಿಯವರ ನಿಧನದ ಬಳಿಕ ಅವರ ಮಗಳು ರಜನಿ ಶೆಟ್ಟಿ ಮತ್ತು ಅಳಿಯ ಕರುಣಾಕರ ಶೆಟ್ಟಿ ಅವರು ಸಂತ್ರಸ್ತರನ್ನು ಮನೆಯ ದನ, ತೋಟದ ಕೆಲಸ, ಮನೆ ಶೌಚಾಲಯ ಸ್ವಚ್ಛತೆ ಸೇರಿದಂತೆ ವಿವಿಧ ಕೆಲಸಗಳಿಗೆ ಬಳಸಿಕೊಂಡಿದ್ದಾರೆ.

ಅವರಿಂದ ದನ-ಎಮ್ಮೆ ನೋಡಿಕೊಳ್ಳುವುದು, ಸಗಣಿ ತೆಗೆದು ಗದ್ದೆ ಕೆಲಸ ಮಾಡುವುದು ಮತ್ತು ಮನೆಯಲ್ಲಿನ ಇತರ ಕೆಲಸಗಳನ್ನು ತಡೆಯದೆ ಬಲವಂತವಾಗಿ ಮಾಡಿಸುತ್ತಾ, ಸರಿಯಾದ ವೇತನ ನೀಡದೆ ಮತ್ತು ಮೂಲಭೂತ ಸೌಕರ್ಯಗಳಿಲ್ಲದೆ ದನದ ಕೊಟ್ಟಿಗೆಯಲ್ಲೇ ಮಲಗಲು ಒತ್ತಾಯಿಸಲಾಗುತ್ತಿದ್ದುದಾಗಿ ಆರೋಪಿಸಲಾಗಿದೆ. ಮನೆಯಿಂದ ಹೊರಗೆ ಹೋಗಲು ಅವಕಾಶ ನೀಡದೆ, ದೌರ್ಜನ್ಯ ಸಹ ಮಾಡಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

ಈ ಪ್ರಕರಣದ ಹಿನ್ನೆಲೆಯಲ್ಲಿ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಹೆಚ್.ಡಿ. ಕುಲಕರ್ಣಿ ಅಧಿಕಾರಿಗಳ ನಿರ್ದೇಶನದಲ್ಲಿ ಆರೋಪಿ ರಜನಿ ಶೆಟ್ಟಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

 


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!