ಫಾಲ್ಸ್‌ ನೋಡಲು ಹೋದವ ನೀರಲ್ಲಿ ಕೊಚ್ಚಿಕೊಂಡು ಹೋದ: ನಾಪತ್ತೆಯಾದ ಯುವಕನಿಗೆ ಶೋಧ ಕಾರ್ಯ!

0
Spread the love

ಕಾರವಾರ:- ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಜೋಗನ ಹಕ್ಕಲು ಜಲಪಾತದಲ್ಲಿ ಯುವಕನೊಬ್ಬ ಕಾಲುಜಾರಿ ಹಳ್ಳಕ್ಕೆ ಬಿದ್ದು ನಾಪತ್ತೆಯಾದ ಘಟನೆ ಜರುಗಿದೆ. 24 ವರ್ಷದ ಪವನ್ ಗಣಪತಿ ಜೋಗಿ ನಾಪತ್ತೆಯಾದ ಯುವಕ.

Advertisement

ಸ್ನೇಹಿತ ವಾಸುದೇವ್ ಜೊತೆ ಪವನ್‌ ಫಾಲ್ಸ್ ನೋಡಲು ಭಾನುವಾರ ಸಂಜೆ ತೆರಳಿದ್ದ. ಜಲಪಾತದ ಸಮೀಪ ರಭಸವಾಗಿ ಹರಿಯುತ್ತಿದ್ದ ಹಳ್ಳವನ್ನ ದಾಟುವಾಗ ಕಾಲುಜಾರಿ ಬಿದ್ದು ಕೊಚ್ಚಿಕೊಂಡು ಹೋಗಿದ್ದಾನೆ. ಘಟನಾ ಸ್ಥಳಕ್ಕೆ ಶಿರಸಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು, ಪರಿಶೀಲನೆ ನಡೆಸಿದ್ದಾರೆ.


Spread the love

LEAVE A REPLY

Please enter your comment!
Please enter your name here