ಮಂಡ್ಯ: ಜಮೀನಿನಲ್ಲಿ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ರೈತ ಸಾವು!

0
Spread the love

ಮಂಡ್ಯ:- ಜಮೀನಿನಲ್ಲಿ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ರೈತನೋರ್ವ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಸಾಗ್ಯ ಗ್ರಾಮದಲ್ಲಿ ಜರುಗಿದೆ.

Advertisement

ಇದೇ ಗ್ರಾಮದ ನಿವಾಸಿ ರಮೇಶ್ (38) ಮೃತ ರೈತ. ಬೆಳಿಗ್ಗೆ ಎಂದಿನಂತೆ ತಮ್ಮ ಜಮೀನಿಗೆ ರಮೇಶ್ ತೆರಳಿದ್ದ. ಈ ವೇಳೆ ತೆಂಗಿನ ಗರಿಗಳನ್ನು ಜಮೀನಿನಿಂದ ಹೊರ ಹಾಕುವ ವೇಳೆ ವಿದ್ಯುತ್ ಶಾಕ್ ಹೊಡೆದಿದೆ. 11 ಕೆವಿ ಸಾಮರ್ಥ್ಯದ ವಿದ್ಯುತ್ ತಂತಿಗಳಿಗೆ ತೆಂಗಿನ ಗರಿ ತಾಗಿ ಈ ದುರಂತ ಸಂಭವಿಸಿದೆ.

ರೈತನ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.


Spread the love

LEAVE A REPLY

Please enter your comment!
Please enter your name here