Mandya: ಜಮೀನಿನಲ್ಲಿ ಗಾಂಜಾ ಬೆಳೆದ ರೈತ; ಅಬಕಾರಿ ಅಧಿಕಾರಿಗಳ ದಾಳಿ!

0
Spread the love

ಮಂಡ್ಯ:- ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಕಾಶಿಮುರುಕನಹಳ್ಳಿ ಗ್ರಾಮದಲ್ಲಿ ರೈತನೋರ್ವ ತನ್ನ ಜಮೀನಿನಲ್ಲಿ ಅಡಿಕೆ, ಬಾಳೆ, ತೆಂಗು ಜೊತೆಗೆ ಸಾಲು-ಸಾಲಾಗಿ ಗಾಂಜಾ ಬೆಳೆದಿರುವ ಘಟನೆ ಜರುಗಿದೆ.

Advertisement

ಬೋರೇಗೌಡ ಎಂಬಾತನೇ ಗಾಂಜಾ ಬೆಳೆದ ರೈತ. ಬೋರೇಗೌಡ, ತನ್ನ ಜಮೀನಿನಲ್ಲಿ ಅಡಿಕೆ, ಬಾಳೆ, ತೆಂಗು ಜೊತೆಯಲ್ಲೇ ಗಾಂಜಾ ಗಿಡಗಳನ್ನು ಬೆಳೆದಿದ್ದ. ಇದರ ಖಚಿತ ಮಾಹಿತಿ ಪಡೆದ ಅಬಕಾರಿ ಉಪನಿರೀಕ್ಷಕ ನಾಗಭೂಷಣ್ ತಂಡ ದಾಳಿ ಮಾಡಿದ್ದು, ಈ ವೇಳೆ ಲಕ್ಷ ಮೌಲ್ಯದ 14 ಕೆಜಿ ತೂಕದ ಗಾಂಜಾ ಗಿಡಗಳನ್ನು ವಶಕ್ಕೆ ಪಡೆಯಲಾಗಿದೆ. ಕೆಆರ್‌ಪೇಟೆ ಅಬಕಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here