ಮಂಡ್ಯ;-ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಚಿಕ್ಕೋನಹಳ್ಳಿ ಗ್ರಾಮದ ಬಳಿ ಅಕ್ರಮವಾಗಿ ಬೈಕ್ ನಲ್ಲಿ ಗಾಂಜಾ ಸಾಗಾಣೆ ಮಾಡ್ತಿದ್ದ ಮೂವರು ಆರೋಪಿಗಳನ್ನು ಅಬಕಾರಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
Advertisement
ಬಂಧಿತರನ್ನು ಉಮ್ರಾಜ್ ಬೇಗ್, ಸೈಯದ್ ಹುಸೇನ್,ಜಬಿವುಲ್ಲಾ ಎಂದು ಗುರುತಿಸಲಾಗಿದೆ. ಆರೋಪಿಗಳು ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಆಧರಿಸಿ ಅಬಕಾರಿ ಡಿ.ಸಿ ನಾಗಶಯನ, ಇನ್ಸ್ಪೆಕ್ಟರ್ ಪ್ರಪುಲ್ಲಾ ಚಂದ್ರ ಸೇರಿದ ಅಬಕಾರಿ ಪೊಲೀಸರ ತಂಡ ದಾಳಿ ನಡೆಸಿತು. ಈ ವೇಳೆ ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತರಿಂದ 3.5 ಲಕ್ಷ ರೂ ಮೌಲ್ಯದ ಗಾಂಜಾ ಸೀಜ್ ಮಾಡಿದ್ದಾರೆ.
ಬಂಧಿತ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.