ಮಂಡ್ಯ ; ಬೆಳ್ಳಂ ಬೆಳಗ್ಗೆ ಕತ್ತು ಸೀಳಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯದ ಮದ್ದೂರಿನ ಲಕ್ಷ್ಮೇಗೌಡನದೊಡ್ಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕೃಷ್ಣೇಗೌಡ 46 ಹತ್ಯೆಯಾದ ದುರ್ದೈವಿಯಾಗಿದ್ದು,
Advertisement
ಬೆಳ್ಳಂ ಬೆಳಗ್ಗೆ ಚಾಕುವಿನಿಂದ ಇರಿದು ಕತ್ತು ಸೀಳಿ ಹಂತಕರು ಪಾರಾರಿಯಾಗಿದ್ದಾರೆ. ಗ್ರಾಮದ ಮದನಹಟ್ಟಮ್ಮ ದೇವಸ್ಥಾನದ ಮುಂಭಾಗದಲ್ಲೆ ರಕ್ತ ಹರಿದಿದೆ.
ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಕೆಎಂ ದೊಡ್ಡಿ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ. ಕೆಎಂ ದೊಡ್ಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ದುರ್ಘಟನೆಯಾಗಿದೆ.