ಮಂಡ್ಯ: KRS ಸಮೀಪದ ಚಿಕ್ಕಾಯರಹಳ್ಳಿ ಬಳಿ ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿಯೊಬ್ಬರು ನೀರುಪಾಲಾದ ಘಟನೆ ನಡೆದಿದೆ.
ಮೃತನನ್ನು ರಿತಿಕ್ ಕುಟ್ಟಪ್ಪ ಎಂದು ಗುರುತಿಸಲಾಗಿದ್ದು, ಅವರು ಮೈಸೂರು ಮಹಾಜನ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಸಿ.ಎ ವ್ಯಾಸಂಗ ಮಾಡುತ್ತಿದ್ದರು.
ರಿತಿಕ್ ಕುಟ್ಟಪ್ಪ ತಮ್ಮ ಮೂವರು ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದು, ಚಿಕ್ಕಾಯರಹಳ್ಳಿ ಬಳಿ ಕಾವೇರಿ ನದಿಯಲ್ಲಿ ಆಟವಾಡಲು ಹೋಗಿದ್ದ ವೇಳೆ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ್ದಾರೆ. ಘಟನೆ ಗಮನಿಸಿದ ಸಾರ್ವಜನಿಕರು ತಕ್ಷಣವೇ ರಕ್ಷಣೆಗೆ ಧಾವಿಸಿ ಯುವಕನನ್ನು ಹೊರತೆಗೆದು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ರಿತಿಕ್ ಸಾವನ್ನಪ್ಪಿದ್ದಾರೆ.
ಈ ಘಟನೆ KRS ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿಸಲಾಗಿದೆ. ಮೃತದೇಹವನ್ನು ಶವಪರೀಕ್ಷೆಗಾಗಿ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ರವಾನೆ ಮಾಡಲಾಗಿದೆ



