Mandya: ರೈಲಿಗೆ ಸಿಲುಕಿ ಯುವತಿ ದಾರುಣ ಸಾವು!

0
Spread the love

ಮಂಡ್ಯ:- ಮಂಡ್ಯ ರೈಲು ನಿಲ್ದಾಣದಲ್ಲಿ ದುರಂತ ಸಂಭವಿಸಿದ್ದು, ರೈಲಿಗೆ ಸಿಲುಕಿ ಗೋಲ್ಡ್ ಮೆಡಲ್ ಪದವೀಧರೆ ಸಾವನ್ನಪ್ಪಿದ ಘಟನೆ ಜರುಗಿದೆ.

Advertisement

ಮಂಡ್ಯದ ಸ್ವರ್ಣಸಂದ್ರ ಬಡಾವಣೆ ನಿವಾಸಿ 24 ವರ್ಷದ ರಮ್ಯ ಮೃತ ಯುವತಿ ಎನ್ನಲಾಗಿದೆ. ರೈಲು ನಿಲ್ದಾಣದ ರೈಲ್ವೆ ಮೇಲ್ಸೇತುವೆ ಬಳಿ ಹಳಿ ದಾಟುವ ವೇಳೆ ಹಂಪಿ ಎಕ್ಸ್‌ಪ್ರೆಸ್‌ ರೈಲಿಗೆ ಸಿಲುಕಿ ಘಟನೆ ಸಂಭವಿಸಿದೆ.

ರೈಲಿಗೆ ಸಿಲುಕಿದ ಯುವತಿಯ ದೇಹ ಛಿದ್ರಗೊಂಡಿದೆ. ಎಂಕಾಂನಲ್ಲಿ ಚಿನ್ನದ ಪದಕ ಪಡೆದಿದ್ದ ಯುವತಿ ಬೆಂಗಳೂರಿನಲ್ಲಿ ಕೆಲಸ ಮಾಡ್ತಿದ್ದರು ಎನ್ನಲಾಗಿದೆ.

ಸ್ಥಳಕ್ಕೆ ಮಂಡ್ಯ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮೃತ ಯುವತಿ ಶವವನ್ನು ಜಿಲ್ಲಾಸ್ಪತ್ರೆಗೆ ಸಾಗಿಸಿ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.


Spread the love

LEAVE A REPLY

Please enter your comment!
Please enter your name here