ಕಲಬುರಗಿ:- ಇಲ್ಲಿನ ಶ್ರೀ ಗುರು ದತ್ತಾತ್ರೇಯನ ಸನ್ನಿಧಿಯಲ್ಲಿ ಮಂಗಳ ಮುಖಿಯರು ಒಬ್ಬರಿಗೊಬ್ಬರು ಬಡಿದಾಡಿಕೊಂಡಿರುವ ದೃಶ್ಯ ಇದೀಗ ಭಾರೀ ವೈರಲ್ ಆಗಿದೆ.
Advertisement
ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಗಾಣಗಾಪುರದಲ್ಲಿರುವ ಶ್ರೀ ಗುರು ದತ್ತಾತ್ರೇಯ ದೇವಸ್ಥಾನದಲ್ಲಿ ಮಂಗಳಮುಖಿಯರು ಪರಸ್ಪರ ಜಡೆ ಹಿಡಿದುಕೊಂಡು ನೆಲಕ್ಕೆ ಉರುಳಾಡಿ ಬಡಿದಾಡಿಕೊಂಡಿದ್ದಾರೆ. ಇವರ ಹೊಡೆದಾಟದ ವಿಡಿಯೋ ಸಧ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ತರಾವರಿ ಕಾಮೆಂಟ್ ಹಾಕುತ್ತಿದ್ದಾರೆ. ಗಾಣಗಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.