Mangalore Crime: ಸರ್ಕಾರ ಇಂತಹ ಘಟನೆಗಳನ್ನ ಹತ್ತಿಕ್ಕದೇ ಸುಮ್ಮನೇ ಬಿಡೋದಿಲ್ಲ: ಪರಮೇಶ್ವರ್

0
Spread the love

ಬೆಂಗಳೂರು: ಸರ್ಕಾರ ಇಂತಹ ಘಟನೆಗಳನ್ನ ಹತ್ತಿಕ್ಕದೇ ಸುಮ್ಮನೇ ಬಿಡೋದಿಲ್ಲ ಎಂದು ಡಾ.ಜಿ ಪರಮೇಶ್ವರ್ ಹೇಳಿದ್ದಾರೆ. ಬಂಟ್ವಾಳದ ಅಬ್ದುಲ್ ರಹಮಾನ್ ಹತ್ಯೆಯಿಂದ ಕರಾವಳಿ ಭಾಗದಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ.

Advertisement

ಮುಸ್ಲಿಂ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದು, ಗೃಹ ಸಚಿವ ಮತ್ತು ಉಸ್ತುವಾರಿ ಸಚಿವರ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ. ಈ ಮಧ್ಯೆ ಪ್ರತಿಕ್ರಿಯಿಸಿರುವ ಜಿ ಪರಮೇಶ್ವರ್, ಮುಲಾಜಿಲ್ಲದೇ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಂಗಳೂರಲ್ಲಿ ದಿನೇ ದಿನೇ ಉದ್ವಿಗ್ನ ಪರಿಸ್ಥಿತಿ ನಿರ್ಮಾವಾಗುತ್ತಿರುವುದರಿಂದ ತಕ್ಷಣ ಆ್ಯಂಟಿ ಕಮ್ಯುನಲ್ ವಿಂಗ್ ಜಾರಿ ಮಾಡುವಂತೆ ಸರ್ಕಾರ ಆದೇಶ ನೀಡಿದೆ. ಸರ್ಕಾರ ಇಂತಹ ಘಟನೆಗಳನ್ನ ಹತ್ತಿಕ್ಕದೇ ಸುಮ್ಮನೇ ಬಿಡೋದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಇನ್ನೂ ಕರಾವಳಿ ಭಾಗ ಅಂದರೆ ಉಡುಪಿ, ಶಿವಮೊಗ್ಗ ಮತ್ತು ಮಂಗಳೂರನ್ನು ಸೂಕ್ಷ್ಮವಾಗಿ ಪರಿಗಣಿಸಿದೆ. ಉಡುಪಿ ಶಿವಮೊಗ್ಗ ಮಂಗಳೂರು ಸೇರಿ ಎಲ್ಲೆಲ್ಲಿ ಆ್ಯಂಟಿ ಕಮ್ಯೂನಲ್ ಆಕ್ಟಿವಿಟೀಸ್ ಆಗುತ್ತೆ ಇವುಗಳನ್ನ ಸೂಕ್ಷ್ಮ ಪ್ರದೇಶಗಳಾಗಿ ಪರಿಗಣಿಸಿದ್ದೇವೆ ಎಂದು ಹೇಳಿದ್ದಾರೆ.

 


Spread the love

LEAVE A REPLY

Please enter your comment!
Please enter your name here