ಮಂಗಳೂರು: ನಗರದ ಕೆಲ ಭಾಗಗಳಲ್ಲಿ ಚಿರತೆ ಕಾಟ ಹೆಚ್ಚಾಗಿದೆ. ರಾತ್ರಿ ವೇಳೆ ಚಿರತೆ ನಗರ ಪ್ರದೇಶಕ್ಕೆ ನುಗ್ಗುತ್ತಿದ್ದು, ಜನರಲ್ಲಿ ಭಯಭೀತಿಯನ್ನು ಉಂಟುಮಾಡಿದೆ.
ಮಂಗಳೂರಿನ ಕದ್ರಿ, ಕೈಬಟ್ಟಲ್, ಶಕ್ತಿನಗರ ಮತ್ತು ಮರೋಳಿ ಭಾಗಗಳಲ್ಲಿ ತೀವ್ರ ಚಿರತೆ ಚಲನವಲನ ಕಂಡು ಬಂದಿದೆ. ಕೆಲ ಮನೆಗಳ ಸಿಸಿಟಿವಿ ಕ್ಯಾಮೆರಾಗಳಲ್ಲಿ ಚಿರತೆ ಓಡಾಟ ಸೆರೆಯಾಗಿದೆ, ಮತ್ತು ಈ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ನಗರವಾಸಿಗಳು ರಾತ್ರಿ ವೇಳೆ ಹೊರಬಾರದ ಪರಿಸ್ಥಿತಿಯಲ್ಲಿದ್ದಾರೆ, ವಿಶೇಷವಾಗಿ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವವರು ಮತ್ತು ಧಾರ್ಮಿಕ ಉತ್ಸವಗಳಿಗೆ ಹೋಗುವವರು ಆತಂಕದಲ್ಲಿದ್ದಾರೆ. ಚಿರತೆಯನ್ನು ಸೆರೆಹಿಡಿಯಲು ಕದ್ರಿ ಮತ್ತು ಮರೋಳಿ ಭಾಗಗಳಲ್ಲಿ ಅರಣ್ಯ ಇಲಾಖೆ ಬೋನು ಆರಂಭಿಸಿದೆ. ರಾತ್ರಿ ಸಮಯದಲ್ಲಿ ಮನೆಯಿಂದ ಹೊರಬರುವಾಗ ಎಚ್ಚರಿಕೆ ವಹಿಸಲು ಮತ್ತು ಚಿರತೆ ಕಂಡು ಬಂದಲ್ಲಿ ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ನಾಗರಿಕರಿಗೆ ಸೂಚನೆ ನೀಡಲಾಗಿದೆ.



