ಮಾವು ಬೆಲೆ ಕುಸಿತ: ರೈತರ ನೆರವಿಗೆ ಧಾವಿಸುವಂತೆ ಕೇಂದ್ರ ಕೃಷಿ ಸಚಿವರಿಗೆ ಸಿದ್ದರಾಮಯ್ಯ ಪತ್ರ!

0
Spread the love

ಬೆಂಗಳೂರು/ನವದೆಹಲಿ: ಕೇಂದ್ರ ಕೃಷಿ ಸಚಿವ ಚೌಹಣ್ಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದು ಮಾವು ಬೆಳೆಗಾರರ ನೆರವಿಗೆ ಧಾವಿಸಬೇಕೆಂದು ಮನವಿ ಮಾಡಿದ್ದಾರೆ.

Advertisement

ಪತ್ರದಲ್ಲಿ ಏನಿದೆ?

ಅನಿರೀಕ್ಷಿತ ಬೆಲೆ ಇಳಿತ ಬದಲಾದ ಮಾರುಕಟ್ಟೆ ಸನ್ನಿವೇಶ ಮಾವು ಬೆಳೆಗಾರರು ಕಂಗಲಾಗಿದ್ದಾರೆ. ಮಾವು ಬೆಳೆಯು ಕರ್ನಾಟಕದ ಪ್ರಮುಖ ಬೆಳೆಯಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಮಾವು ಬೆಳೆಗಾರರು ತೀವ್ರ ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಮಾವು ಬೆಳೆಗಾರರಿಗೆ ಸೂಕ್ತ ಬೆಂಬಲ ಬೆಲೆ ಘೋಷಿಸಬೇಕು. ಈ‌ ನಿಟ್ಟಿನಲ್ಲಿ ಮಾವು ಬೆಳೆಗಾರರ ನೆರವಿಗೆ ಕೇಂದ್ರ ಸರ್ಕಾರ ಧಾವಿಸಬೇಕು ಎಂದು ಸಿಎಂ ಪತ್ರದ ಮುಖೇನ ಮನವಿ ಮಾಡಿದ್ದಾರೆ.

ನಿನ್ನೆ ತಾನೇ ತೋತಾಪುರಿ ಮಾವು ಬೆಲೆ ಕುಸಿತವಾಗಿರುವ ಹಿನ್ನೆಲೆ ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದರು.

ಇನ್ನೂ ಹಣ್ಣಿನ ರಾಜ ಮಾವಿಗೆ ಮಾರುಕಟ್ಟೆಯಲ್ಲಿ ನಿರೀಕ್ಷಿತ ಬೇಡಿಕೆ ಇಲ್ಲದೆ ದರ ಕುಸಿದಿದ್ದು, ಬೆಳೆಗಾರರನ್ನು ಕಂಗಾಲಾಗಿಸಿದೆ. ನಾನಾ ತಳಿಗಳ ಮಾವಿನ ಹಣ್ಣು ಏಕಕಾಲಕ್ಕೆ ಮಾರುಕಟ್ಟೆಗೆ ಪ್ರವೇಶಿಸಿದ್ದರಿಂದ ಬೆಲೆ ಕಡಿಮೆಯಾಗಿದೆ. ಅಲ್ಲದೆ ಇದೀಗ ಮಳೆ ಅಧಿಕವಾಗಿ ಹಣ್ಣಿನ ಸಿಪ್ಪೆ ಕಪ್ಪಾಗುತ್ತಿರುವುದು ಮತ್ತಷ್ಟು ಬೆಲೆ ಕುಸಿಯಲು ಹಾಗೂ ಗ್ರಾಹಕರು ಖರೀದಿಸಲು ಹಿಂದೇಟು ಹಾಕುವಂತೆ ಮಾಡಿದೆ.


Spread the love

LEAVE A REPLY

Please enter your comment!
Please enter your name here