ವಿಜಯಸಾಕ್ಷಿ ಸುದ್ದಿ, ಗದಗ: ಇತ್ತೀಚೆಗೆ ನಗರದ ಮನೋರಮಾ ಕಾಲೇಜಿನ ಬಿಕಾಂ, ಬಿಸಿಎ, ಬಿಬಿಎ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಕಾಲೇಜು ದೈಹಿಕ ನಿರ್ದೇಶಕರಾದ ಖಯೂಮ ನವಲೂರ ಅವರ ಮಾರ್ಗದರ್ಶನದಲ್ಲಿ `ಮನೋರಮಾ ಪ್ರೀಮಿಯರ್ ಲೀಗ್’ ಕ್ರಿಕೆಟ್ ಆಯೋಜಿಸಲಾಗಿತ್ತು.
ಉದ್ಘಾಟಕರಾಗಿ ಸಂಸ್ಥೆಯ ಚೇರಮನ್ ಎನ್.ಎಮ್. ಕುಡುತರಕರ ಆಗಮಿಸಿದ್ದರು. ಸಂಸ್ಥೆಯ ಕಾರ್ಯದರ್ಶಿಗಳು ಹಾಗೂ ಕ್ರೀಡಾಪಟುಗಳಾದ ಮಂಜುನಾಥ ಕುಡತರಕರ ಎಲ್ಲ ಕ್ರೀಡಾಪಟುಗಳಿಗೆ ಅಭಿನಂದಿಸಿ ಮಾತನಾಡಿ, ಕ್ರೀಡೆಯಲ್ಲಿ ಸೋಲು-ಗೆಲುವು ಸಹಜ. ಆದರೆ ಪ್ರಾಮಾಣಿಕತೆ, ಬದ್ಧತೆಯಿಂದ ಆಟ ಆಡಿ ಎಂದು ಪ್ರೋತ್ಸಾಹಿಸಿದರು.
ಮಹಾವಿದ್ಯಾಲಯದ ಪ್ರಾಚಾರ್ಯ ಬಿ.ಎಸ್. ಹೀರೆಮಠ ವಿಜೇತ ತಂಡಗಳಿಗೆ ಬಹುಮಾನ ಹಾಗೂ ಟ್ರೋಫಿಗಳನ್ನು ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಕೀಶೋರ ಮುದಗಲ್ಲ, ಸಂಸ್ಥೆಯ ನಿರ್ದೇಶಕರಾದ ಚೇತನ್ ಕುಡತರಕರ, ಸಂಜಯ್ ಕುಡತರಕರ ಉಪಸ್ಥಿತರಿದ್ದರು. ನಿರ್ಣಾಯಕರಾಗಿ ಆದಿತ್ಯಾ ಜೋಶಿ, ಕಾಲೇಜಿನ ಸಂಯೋಜಕರಾದ ಪ್ರೊ. ಸವಿತಾ ಪೂಜಾರ, ಪ್ರೊ.ಅಲ್ವಿನಾ ಡಿ., ಪ್ರೊ. ಚೈತ್ರಾ ಡಿ, ಪ್ರೊ. ಶಾಹೀದಾ ಶಿರಹಟ್ಟಿ ಹಾಗೂ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.