ಮದುವೆ ದಿಬ್ಬಣದ ಬಸ್ ಪಲ್ಟಿ: 15ಕ್ಕೂ ಅಧಿಕ ಜನರಿಗೆ ಗಂಭೀರ ಗಾಯ

0
Spread the love

ರಾಮನಗರ: ಮದುವೆ ದಿಬ್ಬಣದ ಬಸ್ ಪಲ್ಟಿಯಾಗಿ ಕೋಡಿಹಳ್ಳಿ ಗ್ರಾಮದ 15ಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕನಕಪುರ ತಾಲೂಕಿನ ಸಂಗಮ ಬಳಿ ನಡೆದಿದೆ. ಮದುವೆಗೆ ಹೊರಟಿದ್ದ ಖಾಸಗಿ ಬಸ್ ಅತಿಯಾದ ವೇಗದಿಂದ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ.

Advertisement

ಗಾಯಾಳುಗಳನ್ನು ಕನಕಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಬೆಂಗಳೂರಿನ ದಯಾನಂದ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

LEAVE A REPLY

Please enter your comment!
Please enter your name here