ಕವಿಗೋಷ್ಠಿಯಲ್ಲಿ ಗಮನ ಸೆಳೆದ ಮರುಳಸಿದ್ದಪ್ಪ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಸಮೀಪದ ಹುಲಕೋಟಿ ಗ್ರಾಮದ ಪ್ರಸಿದ್ಧ ಶಾಯರಿ ಕವಿ ಮರುಳಸಿದ್ದಪ್ಪ ದೊಡ್ಡಮನಿ ವಿಶ್ವವಿಖ್ಯಾತ ಮೈಸೂರು ದಸರಾದ ಪ್ರಬುದ್ಧ ಕವಿಗೋಷ್ಠಿಯಲ್ಲಿ ಭಾಗವಹಿಸಿ ಕವಿಗೋಷ್ಠಿಯಲ್ಲಿ ಗದಗ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಪಂಚ ಕಾವ್ಯದೌತಣ  ಕವಿಗೋಷ್ಠಿಯಲ್ಲಿ ತಮ್ಮ ಕವನ ವಾಚಿಸುವ ಮೂಲಕ ಎಲ್ಲರ ಗಮನ ಸೆಳೆದರು.

Advertisement

ಕಾರ್ಯಕ್ರಮವನ್ನು ಕವಿ ಡಾ. ಸಿ.ಪಿ. ಕೃಷ್ಣಕುಮಾರ ಉದ್ಘಾಟಿಸಿ ಮಾತನಾಡಿ, ಕವಿ ನಿಜವಾಗಿಯೂ ಅಜರಾಮರ. ಅವನಿಗೆ ಸಾವು ಬರಬಹುದು. ಆದರೆ, ಅವನ ಕಾವ್ಯಕ್ಕೆ ಸಾವೆಂಬುದಿಲ್ಲ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಡಾ. ಮಲ್ಲಿಕಾ ಘಂಟಿ ಮಾತನಾಡಿ, ಕವಿ ಮರುಳಸಿದ್ದಪ್ಪ ದೊಡ್ಡಮನಿ ಇವರು ಜೀವಪರವಾದ ಕಾಳಜಿ ಇರುವ, ಮನುಷ್ಯ ಪ್ರೀತಿ, ನೋವಿಗೆ ಸ್ಪಂದಿಸುವ ಕಾವ್ಯ ಅತ್ಯಂತ ಅರ್ಥಪೂರ್ಣವಾಗಿದೆ ಎಂದು ಹೇಳಿದರು. ವೇದಿಕೆಯ ಮೇಲೆ ಅಪರ ಜಿಲ್ಲಾಧಿಕಾರಿ ಡಾ. ಕೆ. ಶಿವರಾಜ್, ಪ್ರೊ. ಎನ್.ಕೆ. ಲೋಲಾಕ್ಷಿ ಮುಂತಾದವರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here