ಬೆಂಗಳೂರು: ಸಂಕಷ್ಟದಲ್ಲಿರುವ ರಾಜ್ಯ ಸರ್ಕಾರಕ್ಕೆ ಮಹಾಲಕ್ಷ್ಮಿಯು ಐಶ್ವರ್ಯ ಪ್ರಾಪ್ತಿಸಲಿ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಲ್ಲಿ ಇಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ‘ನಮ್ಮ ಮತ, ನಮ್ಮ ಹಕ್ಕು, ನಮ್ಮ ಹೋರಾಟ‘ ನಡೆಯಲಿದೆ.
ಈ ವಿಚಾರವಾಗಿ ಟ್ವೀಟ್ ಮಾಡಿದ್ದು, ಶ್ರೀ ರಾಹುಲ್ ಗಾಂಧಿ ಅವರೇ, ನಮ್ಮ ಕರ್ನಾಟಕಕ್ಕೆ ಸ್ವಾಗತ. ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು. ಕಳೆದ 3 ವರ್ಷದಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ 3 ಲಕ್ಷ ಕೋಟಿ ರೂ ಸಾಲ ಮಾಡಿದೆ. ರಾಜ್ಯದ GSDPಯಲ್ಲಿ ಸಾಲದ ಪ್ರಮಾಣ 24.91% ಆಗಿದೆ ಎಂದಿದ್ದಾರೆ.
ನಿಮ್ಮ ಗ್ಯಾರಂಟಿ ಯೋಜನೆಗೆ ಪ್ರತಿ ವರ್ಷ ಬೇಕಾಗಿರುವುದು 55 ಸಾವಿರ ಕೋಟಿ ರೂ, ಕಳೆದ 3 ವರ್ಷದಿಂದ ನಿಮ್ಮ ಸರ್ಕಾರ ಮಾಡುತ್ತಿರುವ ಸಾಲ ವರ್ಷಕ್ಕೆ 1 ಲಕ್ಷ ಕೋಟಿ ರೂ. ನಿಮ್ಮ ಶಾಸಕರೇ ಅಭಿವೃದ್ಧಿಗೆ ಹಣವಿಲ್ಲ ಎಂದು ಹೇಳುತ್ತಿದ್ದಾರೆ. ತಾಯಿ ಮಹಾಲಕ್ಷ್ಮಿಯು ಹಣಕಾಸು ಸಂಕಷ್ಟದಲ್ಲಿರುವ ರಾಜ್ಯ ಸರ್ಕಾರಕ್ಕೆ ಸರ್ವಐಶ್ವರ್ಯ ಪ್ರಾಪ್ತಿಸಲಿ ಎಂದು ಪ್ರಾರ್ಥನೆ ಮಾಡೋಣ ಎಂದು ಕಿಡಿಕಾರಿದ್ದಾರೆ.