HomeGadag Newsನೀಟ್ ಅಕ್ರಮ ಖಂಡಿಸಿ ರಾಷ್ಟ್ರಪತಿಗೆ ಮನವಿ

ನೀಟ್ ಅಕ್ರಮ ಖಂಡಿಸಿ ರಾಷ್ಟ್ರಪತಿಗೆ ಮನವಿ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಸ್ವಾಭಿಮಾನಿ ಮಹಿಳಾ ವೇದಿಕೆ ವತಿಯಿಂದ ಶನಿವಾರ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಗದಗ ತಹಶೀಲ್ದಾರರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಕರ್ನಾಟಕ ಸ್ವಾಭಿಮಾನಿ ಮಹಿಳಾ ವೇದಿಕೆ ರಾಜ್ಯಾಧ್ಯಕ್ಷೆ ವಿಜಯಲಕ್ಷ್ಮಿ ಅಸೂಟಿ, ದೆಹಲಿಯ ಜಂತರ್‌ಮಂತರ್‌ನಲ್ಲಿ ವಿದ್ಯಾರ್ಥಿಗಳು ನ್ಯಾಯಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದು, ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಬೇಕು.

ವಿದ್ಯಾರ್ಥಿಗಳಿಗೆ ಮರುಪರೀಕ್ಷೆಗೆ ಅವಕಾಶ ಕಲ್ಪಿಸಬೇಕು ಹಾಗೂ ಪ್ರತಿಭಟನೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ವಿದ್ಯಾರ್ಥಿಗಳ ಮೇಲೆ ನಡೆದಿರುವ ದೌರ್ಜನ್ಯಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಸೂಕ್ತ ರಕ್ಷಣೆ ನೀಡಬೇಕು. ಕೇಂದ್ರ ಗೃಹ ಸಚಿವ ಅಮಿತ್ ಶಾ ವಿದ್ಯಾರ್ಥಿಗಳ ರಕ್ಷಣೆಯಲ್ಲಿ ವಿಫಲರಾಗಿದ್ದು, ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸಬೇಕು. ಸಂವಿಧಾನದ ಮೇಲೆ ಜನರ ವಿಶ್ವಾಸ ಉಳಿಯುವಂತೆ ರಾಷ್ಟ್ರಪತಿಗಳು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ತಕ್ಷಣ ಮಧ್ಯಪ್ರವೇಶಿಸದಿದ್ದರೆ ರಾಜ್ಯದ ವಿದ್ಯಾರ್ಥಿಗಳೊಂದಿಗೆ ಸೇರಿ ಉಗ್ರ ಹೋರಾಟ ಹಮ್ಮಿಕೊಳ್ಳುವುದಾಗಿ ವಿಜಯಲಕ್ಷ್ಮಿ ಅಸೂಟಿ ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷೆ ಮಮತಾಜ್ ಕಟ್ಟಿಮನಿ, ರಾಜ್ಯ ಸಂಘಟನಾ ಕಾರ್ಯದರ್ಶಿ ವಂಗೆಮ್ಮ ಎಚ್. ದೊಡ್ಡಮನಿ, ಹುಬ್ಬಳ್ಳಿ–ಧಾರವಾಡ ಜಿಲ್ಲಾಧ್ಯಕ್ಷೆ ಜುಬೇದಾ ನದಾಫ್, ರಾಜ್ಯ ಉಪಾಧ್ಯಕ್ಷೆ ಬೇಗಂ ಹವಾಲ್ದಾರ, ರಾಜ್ಯ ಸಂಘಟನಾ ಕಾರ್ಯದರ್ಶಿ ಚಿನ್ನಮ್ಮ ವಡ್ಡರ, ಸಂಗಮ್ಮ ಅಂಗಡಿ, ನೀಲಮ್ಮ ಗಾಜಿ, ಕಲಾಶ್ರೀ (ಬಾಗಲಕೋಟೆ ಜಿಲ್ಲಾಧ್ಯಕ್ಷೆ), ಬಸೀರಾ, ಸೋಫಿಯಾ, ವಜ್ರೇಶ್ವರಿ, ನಾಗರತ್ನ, ಚಿನ್ನಮ್ಮ, ಮಾಲನಬಿ ಕಣಗಿನಹಾಳ, ಲಾಡಬಿ ಕಲ್ಮನಿ, ಮೈರೂನ, ಗಂಗವ್ವ ವಡ್ಡರ, ವಿದ್ಯಾ, ಶ್ರೇಯಾ, ಶಂಶಾದ್ ಬೇಗಂ, ಪ್ಯಾರಿಜಾನ್, ಭಾರತಿ, ಫರಿದಾ, ಹಮೀದಾ, ದಾವಲಬಿ, ನಿರ್ಮಲಾ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಹಾಗೂ ಸದಸ್ಯರು ಪಾಲ್ಗೊಂಡಿದ್ದರು.

“ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ಮರುಪರೀಕ್ಷೆ ನಡೆಸಬೇಕು ಹಾಗೂ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು.”

– ವಿಜಯಲಕ್ಷ್ಮಿ ಅಸೂಟಿ, ರಾಜ್ಯಾಧ್ಯಕ್ಷೆ, ಕರ್ನಾಟಕ ಸ್ವಾಭಿಮಾನಿ ಮಹಿಳಾ ವೇದಿಕೆ

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img