Homecultureಧರ್ಮ ಪರಿಪಾಲನೆಯಿಂದ ಜೀವನದಲ್ಲಿ ಶ್ರೇಯಸ್ಸು:ರಂಭಾಪುರಿ ಶ್ರೀಗಳು

ಧರ್ಮ ಪರಿಪಾಲನೆಯಿಂದ ಜೀವನದಲ್ಲಿ ಶ್ರೇಯಸ್ಸು:ರಂಭಾಪುರಿ ಶ್ರೀಗಳು

Spread the love

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ : ಭೌತಿಕ ಬದುಕಿಗೆ ಸಂಪತ್ತಷ್ಟೇ ಮುಖ್ಯವಲ್ಲ. ಅದರೊಟ್ಟಿಗೆ ಧರ್ಮ ಪ್ರಜ್ಞೆ ಮತ್ತು ಸದಾಚಾರ ಬೆಳೆದು ಬರಬೇಕು. ಶುದ್ಧವಾದ ಬುದ್ಧಿ ಸಂಪತ್ತಿನ ಆಗರ. ಧರ್ಮ ಪರಿಪಾಲನೆಯಿಂದ ಜೀವನದಲ್ಲಿ ಸುಖ-ಶಾಂತಿ ಮತ್ತು ಶ್ರೇಯಸ್ಸು ಪ್ರಾಪ್ತವಾಗುವುದೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.
ಅವರು ತಾಲೂಕಿನ ಹಳ್ಯಾಳ ಗ್ರಾಮದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಜಾತ್ರಾ ಮಹೋತ್ಸವ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.
ಪ್ರಕೃತಿ ಮಾನವನನ್ನು ಸೃಷ್ಟಿಸಿದರೆ, ಸಂಸ್ಕಾರ ಆದರ್ಶ ವ್ಯಕ್ತಿಗಳನ್ನು ಸೃಷ್ಟಿಸುತ್ತದೆ. ಆಡಿದ ಮಾತು ಉಳಿಸಿಕೊಳ್ಳುವುದೇ ನಿಜವಾದ ಧರ್ಮ. ಭೌತಿಕ ಬದುಕಿನಿಂದ ಉಂಟಾಗುವ ಅತೃಪ್ತಿ ಮತ್ತು ಅಸಮಾಧಾನ ನಿವಾರಣೆಗೆ ಧರ್ಮವೊಂದೇ ಸುಲಭ ಮಾರ್ಗ. ಬಿತ್ತಿದ ಬೀಜದಂತೆ ಫಸಲು ಹೇಗೋ ಹಾಗೆ ನಮ್ಮ ಆಚರಣೆಯಂತೆ ಫಲ ಪ್ರಾಪ್ತಿ. ಕರ್ತವ್ಯ, ಶಿಸ್ತು, ಶೃದ್ಧೆ, ಛಲ ಮತ್ತು ಸಮರ್ಪಣಾ ಮನೋಭಾವವನ್ನು ಮನುಷ್ಯ ಬೆಳೆಸಿಕೊಳ್ಳಬೇಕಾದ ಅಗತ್ಯವಿದೆ ಎಂದರು.
ನೇತೃತ್ವ ವಹಿಸಿದ ಸುಳ್ಳ ಪಂಚಗೃಹ ಹಿರೇಮಠದ ಶಿವಸಿದ್ಧರಾಮೇಶ್ವರ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ, ವಿಜ್ಞಾನ ಮತ್ತು ತಂತ್ರಜ್ಞಾನ ಬೆಳೆದಂತೆ ಮನುಷ್ಯನ ಭಾವನೆಗಳು ಬೆಳೆಯುತ್ತಿಲ್ಲ. ಮಾತಿಗೆ ತೂಕ ಬರುವುದು ಸತ್ಯದಿಂದಲ್ಲದೇ ಅಸತ್ಯದಿಂದಲ್ಲ. ಉಜ್ವಲ ಜೀವನಕ್ಕೆ ಶ್ರೀ ಜಗದ್ಗುರು ರೇಣುಕಾಚಾರ್ಯರ ವಿಚಾರ ಧಾರೆ ನಮ್ಮೆಲ್ಲರ ಬಾಳಿಗೆ ಬೆಳಕು ತೋರುತ್ತವೆ ಎಂದರು.
  ಬಿ.ಡಿ. ನಾಗನಗೌಡ್ರ, ಟಾಕನಗೌಡ ಗಬ್ಬೂರು, ಬಸವರಾಜ ಹಸರಡ್ಡಿ, ವಿಜಯಕುಮಾರ ಬೆಳವಟಗಿ, ಖಾದರಸಾಬ ನದಾಫ, ಮಾರುತಿ ಅಮರಗೋಳ ಮೊದಲಾದ ಗಣ್ಯರು ಉಪಸ್ಥಿತರಿದ್ದರು. ಗಂಗಾಧರಸ್ವಾಮಿ ಹಿರೇಮಠ ಭಕ್ತಿಗೀತೆ ಹಾಡಿದರು. ಗಂಗಾಧರ ನಾಗನಗೌಡ್ರ ಸ್ವಾಗತಿಸಿದರು.
ಗುರುನಾಥಗೌಡ ಮಾದಾಪುರ ಪ್ರಾಸ್ತಾವಿಕ ಮಾತನಾಡಿ, ತನಗಾಗಿ ಬಯಸುವುದು ಜೀವ ಗುಣ. ಎಲ್ಲರಿಗಾಗಿ ಬಯಸುವುದು ದೇವ ಗುಣ. ಸ್ವಾರ್ಥ ರಹಿತ ಬದುಕಿಗೆ ಬಲವಿದೆ. ಶ್ರೀ ಜಗದ್ಗುರು ರೇಣುಕಾಚಾರ್ಯರು ನಿರೂಪಿಸಿದ ತತ್ವ ಸಿದ್ಧಾಂತಗಳ ಅರಿವು ಆಚರಣೆಯಿಂದ ಮಾನವ ಜೀವನ ಸ್ವಾರ್ಥಕಗೊಳ್ಳುತ್ತದೆ ಎಂದರು.

Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!