ಮುಂದುವರಿದ ಎಂಇಎಸ್ ಪುಂಡರ ಅಟ್ಟಹಾಸ: ಮರಾಠಿಯಲ್ಲಿ ಪಹಣಿ ಕೊಡದಿದ್ದಕ್ಕೆ ಕನ್ನಡಿಗ ಕಾರ್ಯದರ್ಶಿ ಮೇಲೆ ಹಲ್ಲೆ!

0
Spread the love

ಬೆಳಗಾವಿ:- ಮರಾಠಿಯಲ್ಲಿ ಪಹಣಿ ಕೊಡಲಿಲ್ಲ ಎಂದು ಕನ್ನಡಿಗ ಕಾರ್ಯದರ್ಶಿ ಮೇಲೆ ರಾಡ್‌ನಿಂದ ಎಂಇಎಸ್ ಪುಂಡರು ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಕುಂದಾನಗರಿಯಲ್ಲಿ ಜರುಗಿದೆ. ಅಂಬೆವಾಡಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ನಾಗಪ್ಪಾ ಕೊಡಲಿ ಹಲ್ಲೆಗೊಳಗಾದವರು.

Advertisement

ಮಹಾರಾಷ್ಟ್ರ ಎಕೀಕರಣ ಸಮಿತಿಯ ಸಕ್ರಿಯ ಜಿಲ್ಲಾ ಸಂಚಾಲಕ ಚೇತನ ಪಾಟೀಲ ಹಾಗೂ ವಿಕ್ರಂ ಯಳ್ಳೂರಕರ್ ಬೆಂಬಲಿಗರು ಕೃತ್ಯ ಎಸಗಿದ್ದಾರೆ. ತಲೆಗೆ ಹಾಗೂ ಕಾಲುಗಳಿಗೆ ರಾಡ್‌ನಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ನಾಗಪ್ಪಾರನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮಚ್ಚು-ಲಾಂಗು ಮಾರಕಾಸ್ತ್ರಗಳಿಂದ ಗೋಜಗಾ ಗ್ರಾಮದ ಬಳಿ ನಡು ರಸ್ತೆಯಲ್ಲಿಯೇ ಮನಸೋ ಇಚ್ಛೆ ಥಳಿಸಿದ್ದಾರೆ.

ಚೇತನ ಪಾಟೀಲ ಅಂಬೆವಾಡಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ. ಹಾಲಿ ಅಧ್ಯಕ್ಷರ ಮಗ ವಿಕ್ರಂ ಯಳ್ಳೂರಕರ್ ಧಮ್ಕಿ ಹಾಕಿದ್ದಾರೆ. ನಾವು ಹೇಳಿದ ಹಾಗೆ ಕೆಲಸ ಮಾಡು. ಇಲ್ಲವಾದರೆ ಪರಿಣಾಮ ನೆಟ್ಟಗಿರಲ್ಲ. ನಾವೆಲ್ಲಾ ಸೇರಿ ನೀವು ಐವತ್ತು ಸಾವಿರ ಲಂಚ ಪಡೆಯುತ್ತಿದ್ದೀರಿ ಎಂದು ಹೇಳಿ ಏನ್ ಬೇಕಾದರೂ ಮಾಡಬಹುದು ಎಂದು ಧಮ್ಕಿ ಹಾಕಿದ್ದಾರೆ. ಈ ಸಂಬಂಧ ದೂರು ದಾಖಲಾಗಿದ್ದು, ಪೊಲೀಸರಿಂದ ತನಿಖೆ ಮುಂದುವರಿದಿದೆ.


Spread the love

LEAVE A REPLY

Please enter your comment!
Please enter your name here