ಮೆಟ್ರೋ ದರ ಏರಿಕೆ: ರೈಲು ಸಂಚಾರ ತಿರಸ್ಕರಿಸಿದ ಜನ, ಪ್ರಯಾಣಿಕರ ಎದುರೇಟಿಗೆ ಮಣಿದ ಸಿಎಂ- ಜೋಶಿ ವ್ಯಂಗ್ಯ!

0
Spread the love

ಬೆಂಗಳೂರು:- ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ಆಗುತ್ತಿದ್ದಂತೆ ರಾಜ್ಯ ಸರ್ಕಾರದ ವಿರುದ್ಧ ಜನ ಆಕ್ರೋಶ ಹೊರ ಹಾಕಿದರು. ಜನಾಕ್ರೋಶ ಹೆಚ್ಚಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಅವರು ಮೆಟ್ರೋ ಟಿಕೆಟ್ ದರ ಇಳಿಕೆಗೆ ಸೂಚನೆ ಕೊಟ್ಟಿದ್ದಾರೆ.

Advertisement

ಇದೇ ವಿಚಾರವಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು, X ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಬಿಎಂಆರ್‌ಸಿಎಲ್ ಮೆಟ್ರೋ ದರ ಪರಿಷ್ಕರಣೆ ಮಾಡಿದ ಬಳಿಕ ಕೇಂದ್ರ ಸರ್ಕಾರದತ್ತ ಬೆರಳು ತೋರಿಸಿ ಆರೋಪ ಹೊರಿಸಿದ್ದ ಸಿಎಂ, ಈಗ ಜನರ ವಿರೋಧ ತಾರಕಕ್ಕೇರುತ್ತಿದ್ದಂತೆ ಮಣಿದು ಬೆಲೆ ಇಳಿಸಲು ಕ್ರಮ ಕೈಗೊಂಡಿದ್ದಾರೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ಜನ ಮೆಟ್ರೋ ರೈಲು ಸಂಚಾರ ತಿರಸ್ಕರಿಸುತ್ತಿದ್ದಂತೆ ಸಿಎಂ ಯೂಟರ್ನ್ ಹೊಡೆದಿದ್ದಾರೆ. ಈಗ ಟಿಕೆಟ್ ದರ ಕಡಿಮೆ ಮಾಡುವಂತೆ ಬಿಎಂಆರ್‌ಸಿಎಲ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಟೀಕಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಳ್ಳು ಹೇಳುವುದನ್ನು ಬಿಟ್ಟು ಜನಾಭಿಪ್ರಾಯಕ್ಕೆ ಗೌರವ ನೀಡಲಿ. ಇನ್ನಾದರೂ ಜನರ ಅಗತ್ಯತೆಗಳ ಬೆಲೆ ಏರಿಕೆ ನೀತಿಯನ್ನು ಕೈಬಿಡಲಿ ಎಂದು ಸಚಿವ ಪ್ರಲ್ಹಾದ ಜೋಶಿ ತಮ್ಮ ಎಕ್ಸ್ ಖಾತೆಯಲ್ಲಿ ಆಗ್ರಹಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here