ವಿಜಯಪುರದಲ್ಲಿ ಮೈಕ್ರೋ ಫೈನಾನ್ಸ್, ಬಡ್ಡಿ ದಂಧೆಕೋರರ ಹಾವಳಿ: ಬೆಳ್ಳಂಬೆಳಿಗ್ಗೆ ಖಾಕಿ ದಾಳಿ!

0
Spread the love

ವಿಜಯಪುರ:- ಕರ್ನಾಟಕದಲ್ಲಿ ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಹಾಗೂ ಬಡ್ಡಿದಂಧೆಕೋರರ ಹಾವಳಿ ಮಿತಿ ಮೀರುತ್ತಿದೆ. ಅದರಂತೆ ವಿಜಯಪುರ ಜಿಲ್ಲೆಯಲ್ಲಿಯೂ ಮೈಕ್ರೋಫೈನಾನ್ಸ್, ಅಕ್ರಮ ಬಡ್ಡಿ ದಂಧೆಕೋರರ ಕಿರುಕುಳ ಹೆಚ್ಚಾಗಿದ್ದು, ಹೀಗಾಗಿ ಖಚಿತ ಮಾಹಿತಿ ಮೇರೆಗೆ ಪೊಲೀಸರು ಬೆಳ್ಳಂ ಬೆಳಗ್ಗೆ ದಾಳಿ ಮಾಡಿ, ಆರೋಪಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.

Advertisement

ಹೌದು, ವಿಜಯಪುರದಲ್ಲಿ ಕಳೆದ ಕೆಲವು ವಾರಗಳಿಂದ ಮೈಕ್ರೋಫೈನಾನ್ಸ್ ಹಾವಳಿ ಹೆಚ್ಚಾಗಿದ್ದು, ಜೊತೆಗೆ ಮೀಟರ್ ಬಡ್ಡಿ ದಂಧೆಕೋರರ ಕಿರುಕುಳ ಕೂಡ ಹೆಚ್ಚಾಗಿದೆ. ಹೀಗಾಗಿ ಎಸ್ಪಿ ಲಕ್ಷ್ಮಣ ನಿಂಬರಗಿ ಆದೇಶದ ಮೇರೆಗೆ ಬೆಳ್ಳಂಬೆಳಿಗ್ಗೆ ಮನೆಗಳ ಮೇಲೆ ದಾಳಿ ನಡೆಸಿ, ಶಾಕ್ ನೀಡಿದ್ದಾರೆ.

ಮೈಕ್ರೋಫೈನಾನ್ಸ್ ಹಾಗೂ ಅಕ್ರಮ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಬಡ ಜನರು ಬೇಸತ್ತು ಹೋಗಿದ್ದು, ಇದಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ದಾಳಿ ನಡೆಸಿದ್ದಾರೆ. ಜಿಲ್ಲೆಯ ಹಲವೆಡೆ ಪೋಲಿಸರು ದಾಳಿ ನಡೆಸಿದ್ದು, ದಾಳಿ ಮಾಡಿ ಅಕ್ರಮ ಹಣ, ದಾಖಲಾತಿಗಳ ಪರಿಶೀಲನೆ ನಡೆಸಿದ್ದಾರೆ.


Spread the love

LEAVE A REPLY

Please enter your comment!
Please enter your name here