ಮೈಕ್ರೋ ಫೈನಾನ್ಸ್ ಹಾವಳಿ: ಸಾರ್ವಜನಿಕರು ದೂರು ನೀಡಿದ್ರೆ ಕ್ರಮ ಕೈಗೊಳ್ಳುತ್ತೇವೆ – ಡಾ. ಜಿ ಪರಮೇಶ್ವರ್‌

0
Spread the love

ತುಮಕೂರು: ಮೈಕ್ರೋ ಫೈನಾನ್ಸ್ ಹಾವಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ದೂರು ನೀಡಿದ್ರೆ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಹೇಳಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಳವಾಗುತ್ತಿದೆ.

Advertisement

ಯಾರು ಅದರಲ್ಲಿ ಸಿಕ್ಕಿಹಾಕಿಕೊಂಡಿದ್ರೆ ನ್ಯಾಯ ಕೊಡಿಸುತ್ತೇವೆ.  ಸಾರ್ವಜನಿಕರು ದೂರು ನೀಡಿದ್ರೆ ಕ್ರಮ ಕೈಗೊಳ್ಳುತ್ತೇವೆ. ತಿಪಟೂರಿನಲ್ಲಿನ ಮಹಿಳೆ ಸಾವಿಗೆ ಈಗಾಗಲೇ ಕ್ರಮ ಆಗಿದೆ.

ಇಡೀ ರಾಜ್ಯದಲ್ಲಿ ಆ ರೀತಿಯ ಘಟನೆ ಆಗದಂತೆ ತಡೆಯಬೇಕಾಗಿದೆ. ಪೊಲೀಸ್‌‌ ಇಲಾಖೆಗೆ ದೂರು ಬಂದಾಗ ಮಾತ್ರ ಕ್ರಮ ಕೈಗೊಳ್ಳುತ್ತಾರೆ. ಮೈಕ್ರೋ ಫೈನಾನ್ಸ್ ನಡೆಸಲು ಸಾಕಷ್ಟು ಗೈಡಲೈನ್ಸ್ ಗಳಿವೆ ಎಂದು ಹೇಳಿದ್ದಾರೆ.

ಇನ್ನೂ ಶಿವಕುಮಾರ ಶ್ರೀಗಳ ಹೆಸರಿನಲ್ಲಿ ಆಚರಿಸಲು ಉದ್ದೇಶಿಸಿರುವ ದಾಸೋಹ ದಿನವನ್ನು ಅರ್ಥಪೂರ್ಣವಾಗಿ ಆಚರಿಸುವಂತೆ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸಿ ಕ್ರಮಕೈಗೊಳ್ಳಲಾಗುವುದು ಎಂದರು. ಅಲ್ಲದೇ ವೀರಾಪುರದಲ್ಲಿ ಶ್ರೀಗಳ ಪ್ರತಿಮೆ ನಿರ್ಮಾಣಕ್ಕೆ ಈ ಬಾರಿಯ ಬಜೆಟ್‌ನಲ್ಲಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದರು.


Spread the love

LEAVE A REPLY

Please enter your comment!
Please enter your name here