ನವದೆಹಲಿ: ಗುಜರಾತ್ ನ ನಗಲ್ ಪುರ್ ನಲ್ಲಿ ಭಾರತೀಯ ವಾಯುಪಡೆಗೆ ಸೇರಿದ ವಿಮಾನವೊಂದು ತುರ್ತು ಭೂಸ್ಪರ್ಶ ಮಾಡಿದ ಘಟನೆ ಜೂ. 13ರ ಮಧ್ಯಾಹ್ನ ನಡೆದಿದೆ. ಟೇಕಾಫ್ ಆಗಿ ಕೆಲವೇ ನಿಮಿಷಗಳಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ವರದಿಗಳ ಪ್ರಕಾರ ಯಾವುದೇ ಗಾಯ ಅಥವಾ ಹಾನಿಯಾಗಿಲ್ಲ. ಪಠಾಣ್ಕೋಟ್ ವಾಯುನೆಲೆಯಿಂದ ಟೇಕಾಫ್ ಆದ ಹೆಲಿಕಾಪ್ಟರ್ ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ ನಂತರ ಮುನ್ನೆಚ್ಚರಿಕೆಯಾಗಿ ತೆರೆದ ಮೈದಾನದಲ್ಲಿ ಇಳಿದಿದೆ.
ಜೂನ್ 6 ರಂದು ಉತ್ತರ ಪ್ರದೇಶದ ಸಹರಾನ್ಪುರ ಬಳಿ ತರಬೇತಿ ಸಮಯದಲ್ಲಿ ಭಾರತೀಯ ವಾಯುಪಡೆಯ ಮತ್ತೊಂದು ಅಪಾಚೆ ಹೆಲಿಕಾಪ್ಟರ್ ಮುನ್ನೆಚ್ಚರಿಕೆಯಾಗಿ ಇಳಿದ ಕೆಲವೇ ದಿನಗಳಲ್ಲಿ ಈ ಘಟನೆ ನಡೆದಿದೆ.
ಇದಕ್ಕೂ ಮೊದಲು ಏಪ್ರಿಲ್ 3 ರಂದು ಲಡಾಖ್ನಲ್ಲಿ ಹಾರಾಟ ನಡೆಸುತ್ತಿದ್ದ ಅಪಾಚೆ ಹೆಲಿಕಾಪ್ಟರ್ ಕೂಡ ಖಾರ್ದುಂಗ್ಲಾ ಪಾಸ್ ಬಳಿ ಸುಮಾರು 12,000 ಅಡಿ ಎತ್ತರದಲ್ಲಿ ತುರ್ತು ಭೂಸ್ಪರ್ಶ ಮಾಡಿತ್ತು. ಬೋಯಿಂಗ್ ತಯಾರಿಸಿದ ಹಲವಾರು ಅಪಾಚೆ ದಾಳಿ ಹೆಲಿಕಾಪ್ಟರ್ಗಳು ಸುರಕ್ಷತಾ ಕಳವಳಗಳನ್ನು ಹುಟ್ಟುಹಾಕಿದೆ.