ವಿಜಯಸಾಕ್ಷಿ ಸುದ್ದಿ, ಗದಗ: ಇಲ್ಲಿನ ಮನೋರಮಾ ಕಾಲೇಜಿನ ಬಿ.ಕಾಂ, ಬಿಬಿಎ, ಬಿಸಿಎ ವಿದ್ಯಾರ್ಥಿಗಳಿಗೆ ಮೈಂಡ್ ಮ್ಯಾರಥಾನ್ ಕ್ವಿಜ್ ಸ್ಪರ್ಧೆ ಏರ್ಪಡಿಸಲಾಗಿತ್ತು. ಬಿ.ಕಾಂ ವಿಭಾಗದ ಸಂಯೋಜಕರಾದ ಪ್ರೊ. ಅಲ್ವಿನಾ ಡಿ ನೇತೃತ್ವದಲ್ಲಿ ವಿದ್ಯಾರ್ಥಿಗಳನ್ನು ಆಯ್ಕೆಮಾಡುವ ಅವಕಾಶ ನೀಡಿ, ಹತ್ತು ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿತ್ತು.
ಕ್ವಿಜ್ನಲ್ಲಿ ಹೊಯ್ಸಳ ತಂಡದ ತೇಜಸ್ವಿನಿ ಹಾಗೂ ಅವಿನಾಶ ಪ್ರಥಮ ಸ್ಥಾನ, ಕದಂಬ ತಂಡದ ತನುಜಾ ಹಾಗೂ ವಿಶಾಲ ದ್ವೀತಿಯ ಸ್ಥಾನ, ಒಡೆಯರ್ ತಂಡದ ಶಹತಾಜ್ ಹಾಗೂ ಯಶಸ್ವಿನಿ ತೃತೀಯ ಸ್ಥಾನ ಪಡೆದುಕೊಂಡರು.
ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಾಚಾರ್ಯ ಬಿ.ಎಸ್. ಹೀರೆಮಠ ಅಭಿನಂದಿಸಿ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಸತತ ಅಧ್ಯಯನಶೀಲರಾಗುವುದು ಅವಶ್ಯಕ. ಜ್ಞಾನ ಅಭಿವೃದ್ಧಿಗೆ ಪ್ರಚಲಿತ ದಿನಪತ್ರಿಕೆಗಳು ಹಾಗೂ ವಿವಿಧ ಸ್ಪರ್ಧಾ ಪುಸ್ತಕಗಳನ್ನು ಓದುವ ಉತ್ತಮ ಹವ್ಯಾಸ ರೂಢಿಸಿಕೊಂಡು ನಿಮ್ಮ ಭವಿಷ್ಯ ರೂಪಿಸಿಕೊಳ್ಳಿ ಎಂದರು.
ಈ ಸಂದರ್ಭದಲ್ಲಿ ಸಂಸ್ಥೆಯ ಚೇರಮನ್ ಎನ್.ಎಮ್. ಕುಡತರಕರ, ಕಾರ್ಯದರ್ಶಿ ಮಂಜುನಾಥ ಕುಡತರಕರ, ಆಡಳಿತಾಧಿಕಾರಿ ಕಿಶೋರ ಮುದಗಲ್ಲ, ಸಂಸ್ಥೆಯ ನಿರ್ದೇಶಕರಾದ ಸಂಜಯ ಕುಡತರಕರ, ಚೇತನ ಕುಡತರಕರ, ಸಂಯೋಜಕರುಗಳಾದ ಪ್ರೊ. ಅಲ್ವಿನಾ ಡಿ, ಪ್ರೊ. ಸವಿತಾ ಪೂಜಾರ, ಪ್ರೊ. ಚೈತ್ರಾ ಡಿ, ಪ್ರೊ. ಶಾಹೀದಾ ಶಿರಹಟ್ಟಿ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.