ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಮಹಾತ್ಮ ಗಾಂಧಿ ವೃತ್ತದ ಬಳಿ ಇರುವ ಹಳೇ ಜಿಲ್ಲಾಸ್ಪತ್ರೆ ಆವರಣದ ಶ್ರೀ ಅನ್ನಪೂರ್ಣೆಶ್ವರಿ ಪ್ರಸಾದ ನಿಲಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲರ ೭೨ನೇ ಜನ್ಮದಿನದ ಅಂಗವಾಗಿ ಅವರ ಅಭಿಮಾನಿ ಬಳಗದವರು ಸಿಹಿಯೊಂದಿಗೆ ಪ್ರಸಾದ ಸೇವೆಯನ್ನು ಹಮ್ಮಿಕೊಂಡಿದ್ದರು. ೧೬೪೫ನೇ ದಿನದ ಪ್ರಸಾದ ಸೇವೆಗೆ ಸಚಿವ ಎಚ್.ಕೆ. ಪಾಟೀಲ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ತಾಲೂಕಾಧ್ಯಕ್ಷ ಅಶೋಕ ಮಂದಾಲಿ, ಪ್ರಸಾದ ನಿಲಯದ ಗೌರವಾಧ್ಯಕ್ಷ ಎಸ್.ಎಸ್. ಕಳಸಾಪೂರ, ಉಪಾಧ್ಯಕ್ಷ ಉಮೇಶ ಪೂಜಾರ, ಕಾರ್ಯದರ್ಶಿ ಮಂಜುನಾಥ ಭಗವತಿ, ಖಜಾಂಚಿ ವೆಂಕಟೇಶ ಇಮರಾಪೂರ, ಸದಸ್ಯರುಗಳಾದ ಗುರುಮೂರ್ತಿ ಮರಿಗುದ್ದಿ, ರಾಜಣ್ಣ ಮಲ್ಲಾಡದ, ಮುತ್ತು ಜಡಿ, ಸೇವಾಕರ್ತರಾದ ಕೆಂಬಾವಿಮಠ ಮುಂತಾದವರು ಉಪಸ್ಥಿತರಿದ್ದರು.