ಸಚಿವ ಎಚ್.ಕೆ. ಪಾಟೀಲರಿಂದ ಪ್ರವಾಸಿ ಟ್ಯಾಕ್ಸಿ ವಿತರಣೆ ಸರ್ಕಾರಿ ಸೌಲಭ್ಯಗಳ ಸದುಪಯೋಗವಾಗಲಿ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ನಿರುದ್ಯೋಗಿಗಳು ಸ್ವಯಂ ಉದ್ಯೋಗ ನಡೆಸಿ ಸ್ವಾವಲಂಬಿಗಳಾಗಲು ಪ್ರವಾಸಿ ಟ್ಯಾಕ್ಸಿ ಸಹಕಾರಿಯಾಗಲಿದೆ ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ, ಪ್ರವಾಸೋದ್ಯಮ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ. ಪಾಟೀಲ ತಿಳಿಸಿದರು.

Advertisement

ನಗರದ ಕಾಟನ್ ಸೇಲ್ ಸೊಸೈಟಿಯಲ್ಲಿ ಶುಕ್ರವಾರ ಪ್ರವಾಸೋದ್ಯಮ ಇಲಾಖೆಯ ಪ್ರವಾಸಿ ಟ್ಯಾಕ್ಸಿ ಯೋಜನೆಯಡಿ 50 ಟ್ಯಾಕ್ಸಿಗಳನ್ನು ಫಲಾನುಭವಿಗಳಿಗೆ ವಿತರಿಸಿ ಅವರು ಮಾತನಾಡಿದರು.

ಸರ್ಕಾರದಿಂದ ಪ್ರತಿ ಟ್ಯಾಕ್ಸಿಗೆ 5 ಲಕ್ಷ ರೂ (ಸಬ್ಸಿಡಿ) ಸಹಾಯಧನ ಸೌಲಭ್ಯವಿದ್ದು, ಫಲಾನುಭವಿಗಳು ಈ ಯೋಜನೆಯ ಸದುಪಯೋಗಪಡಿಸಿಕೊಳ್ಳಬೇಕೆಂದರು.

ಈ ಸಂದರ್ಭದಲ್ಲಿ ಖನಿಜ ಅಬಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರೋಣ ಶಾಸಕರಾದ ಜಿ.ಎಸ್. ಪಾಟೀಲ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ತಾಲೂಕಾ ಗ್ಯಾರಂಟಿ ಯೊಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ಕೊಟ್ರೇಶ್ವರ ವಿಭೂತಿ, ಡಿ.ಆರ್. ಪಾಟೀಲ ಸೇರಿದಂತೆ ಗಣ್ಯರು, ಪ್ರಮುಖರು ಹಾಜರಿದ್ದರು.


Spread the love

LEAVE A REPLY

Please enter your comment!
Please enter your name here